Featured

ಎಲ್ಲೂರು : ವಿಶ್ವಕರ್ಮ ಸಮಾಜ ಸೇವಾ ಸಂಘದ ವಾರ್ಷಿಕ ಮಹಾ ಸಭೆ ; ಧಾರ್ಮಿಕ ಚಟುವಟಿಕೆ ಸಂಘಟನಾ ಶಕ್ತಿಗೆ ಪೂರಕ : ಮುರಳೀಧರ ಆಚಾರ್ಯ -Vishwanews24

ಎಲ್ಲೂರು : ವಿಶ್ವಕರ್ಮ ಸಮಾಜ ಸೇವಾ ಸಂಘದ ವಾರ್ಷಿಕ ಮಹಾ ಸಭೆ ; ಧಾರ್ಮಿಕ ಚಟುವಟಿಕೆ ಸಂಘಟನಾ ಶಕ್ತಿಗೆ ಪೂರಕ : ಮುರಳೀಧರ ಆಚಾರ್ಯ -Vishwanews24

ಪಡುಬಿದ್ರಿ,: ಎಲ್ಲೂರು ವಿಶ್ವಕರ್ಮ ಸಮಾಜ ಸೇವಾ ಸಂಘವು ಸಾಕಷ್ಟು ಚಟುವಟಿಕೆಯುಕ್ತವಾಗಿದ್ದು, ನಡೆಸುವ ಧಾರ್ಮಿಕ ಚಟುವಟಿಕೆಯು ಸಂಘಟನಾ ಶಕ್ತಿಗೆ ಪೂರಕವಾಗಲಿದೆ ಸ್ವಂತ ನಿವೇಶನದಲ್ಲಿ ಸಮುದಾಯ ಭವನ ನಿರ್ಮಾಣ ಶೀಘ್ರ ಕೈಗೂಡಲಿ ಎಂದು ಬಂಟಕಲ್ಲು ಶ್ರೀ ವಿಶ್ವಕರ್ಮ ಸಂಘದ ಅಧ್ಯಕ್ಷರಾದ ಮುರಳೀಧರ ಆಚಾರ್ಯ ಇನ್ನಂಜೆ ಹೇಳಿದರು.

ಅವರು ಜ.೩೧ರಂದು ಎಲ್ಲೂರು ಕಂಚುಗರ ಕೇರಿಯ ಸ್ವಂತ ನಿವೇಶನದಲ್ಲಿ ನಡೆದ ವಿಶ್ವಕರ್ಮ ಸಮಾಜ ಸೇವಾ ಸಂಘ ರಿ. ಎಲ್ಲೂರು ಇದರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಕಾಪು ದಂಡತೀರ್ಥ ಶಾಲೆಯ ಚಿತ್ರಕಲಾ ಶಿಕ್ಷಕಿ ಅನುಪಮಾ ದೇವರಾಜ ಆಚಾರ್ಯ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿನ ಆಚಾರ ವಿಚಾರವು ಕುಲದ ಶ್ರೇಷ್ಠತೆಗೆ ಮೌಲ್ಯ ನೀಡಲಿ ಎಂದು ಕರೆ ನೀಡಿದರು.

ಪಡುಬಿದ್ರಿ ಉದಯ ಪುರೋಹಿತ್ ಆಶೀರ್ವಚನ ನೀಡಿದರು. ನಿವೃತ್ತ ತಹಶೀಲ್ದಾರ್ ಗಣೇಶ್ ಪಿ. ಆಚಾರ್ಯ ಪಡುಬಿದ್ರಿ, ಶಿಲ್ಪಿ ಗಣಪತಿ ಆಚಾರ್ಯ ಶಂಕರಪುರ ಸಂಘಕ್ಕೆ ಮಾರ್ಗದರ್ಶನದ ಮಾತುಗಳನ್ನಾಡಿದರು.

ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ವೈ.ಸತೀಶ ಎಂ. ಆಚಾರ್ಯ, ಗೌರವಾಧ್ಯಕ್ಷರಾದ ವೈ. ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು.
ಕಾರ್ಯದರ್ಶಿ ವೈ.ಪ್ರಶಾಂತ್ ಆಚಾರ್ಯ ವರದಿ ವಾಚಿಸಿದರು. ಕೋಶಾಽಕಾರಿ ವೈ ಕಿಶೋರ್ ಆಚಾರ್ಯ ಆಯ ವ್ಯಯ ಮಂಡಿಸಿದರು. ಸಂಘಟನಾ ಕಾರ್ಯದರ್ಶಿ ವೈ. ವಿಜಯ ಆಚಾರ್ಯ ಉಚ್ಚಿಲ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಂಚುಗರ ಕೇರಿ: ಎಲ್ಲೂರು ವಿಶ್ವಕರ್ಮ ಸಂಘದ ವಿಶ್ವಕರ್ಮ ಪೂಜೆ

ಪಡುಬಿದ್ರಿ, ವಿಶ್ವಕರ್ಮ ಸಮಾಜ ಸೇವಾ ಸಂಘ ರಿ. ಎಲ್ಲೂರು ವತಿಯಿಂದ ಶ್ರೀ ವಿಶ್ವಕರ್ಮ ಪೂಜೆಯು ಉದಯ ಪುರೋಹಿತ್ ಪೌರೋಹಿತ್ಯದಲ್ಲಿ ಎಲ್ಲೂರು ಕಂಚುಗರ ಕೇರಿಯ ಸ್ವಂತ ನಿವೇಶನದಲ್ಲಿ ಜ.೩೧ರಂದು ಜರಗಿತು.

ಈ ಸಂದರ್ಭ ಸಂಘದ ಗೌರವಾಧ್ಯಕ್ಷ ವೈ. ರಾಘವೇಂದ್ರ ಆಚಾರ್ಯ, ಅಧ್ಯಕ್ಷ ವೈ ಸತೀಶ ಎಂ ಆಚಾರ್ಯ, ಕಾರ್ಯದರ್ಶಿ ವೈ. ಪ್ರಶಾಂತ್ ಆಚಾರ್ಯ, ಕೋಶಾಽಕಾರಿ ವೈ. ಕಿಶೋರ್ ಆಚಾರ್ಯ, ಗೌರವ ಸಲಹೆಗಾರ ವೈ. ವಾಸುದೇವ ಆಚಾರ್ಯ, ಪದಾಽಕಾರಿಗಳು, ಸದಸ್ಯರು, ಸಮಾಜ ಬಾಂಧವರು ಪಾಲ್ಗೊಂಡಿದ್ದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

10 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago