ಪಡುಬಿದ್ರಿ,: ಎಲ್ಲೂರು ವಿಶ್ವಕರ್ಮ ಸಮಾಜ ಸೇವಾ ಸಂಘವು ಸಾಕಷ್ಟು ಚಟುವಟಿಕೆಯುಕ್ತವಾಗಿದ್ದು, ನಡೆಸುವ ಧಾರ್ಮಿಕ ಚಟುವಟಿಕೆಯು ಸಂಘಟನಾ ಶಕ್ತಿಗೆ ಪೂರಕವಾಗಲಿದೆ ಸ್ವಂತ ನಿವೇಶನದಲ್ಲಿ ಸಮುದಾಯ ಭವನ ನಿರ್ಮಾಣ ಶೀಘ್ರ ಕೈಗೂಡಲಿ ಎಂದು ಬಂಟಕಲ್ಲು ಶ್ರೀ ವಿಶ್ವಕರ್ಮ ಸಂಘದ ಅಧ್ಯಕ್ಷರಾದ ಮುರಳೀಧರ ಆಚಾರ್ಯ ಇನ್ನಂಜೆ ಹೇಳಿದರು.
ಅವರು ಜ.೩೧ರಂದು ಎಲ್ಲೂರು ಕಂಚುಗರ ಕೇರಿಯ ಸ್ವಂತ ನಿವೇಶನದಲ್ಲಿ ನಡೆದ ವಿಶ್ವಕರ್ಮ ಸಮಾಜ ಸೇವಾ ಸಂಘ ರಿ. ಎಲ್ಲೂರು ಇದರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಕಾಪು ದಂಡತೀರ್ಥ ಶಾಲೆಯ ಚಿತ್ರಕಲಾ ಶಿಕ್ಷಕಿ ಅನುಪಮಾ ದೇವರಾಜ ಆಚಾರ್ಯ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿನ ಆಚಾರ ವಿಚಾರವು ಕುಲದ ಶ್ರೇಷ್ಠತೆಗೆ ಮೌಲ್ಯ ನೀಡಲಿ ಎಂದು ಕರೆ ನೀಡಿದರು.
ಪಡುಬಿದ್ರಿ ಉದಯ ಪುರೋಹಿತ್ ಆಶೀರ್ವಚನ ನೀಡಿದರು. ನಿವೃತ್ತ ತಹಶೀಲ್ದಾರ್ ಗಣೇಶ್ ಪಿ. ಆಚಾರ್ಯ ಪಡುಬಿದ್ರಿ, ಶಿಲ್ಪಿ ಗಣಪತಿ ಆಚಾರ್ಯ ಶಂಕರಪುರ ಸಂಘಕ್ಕೆ ಮಾರ್ಗದರ್ಶನದ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ವೈ.ಸತೀಶ ಎಂ. ಆಚಾರ್ಯ, ಗೌರವಾಧ್ಯಕ್ಷರಾದ ವೈ. ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು.
ಕಾರ್ಯದರ್ಶಿ ವೈ.ಪ್ರಶಾಂತ್ ಆಚಾರ್ಯ ವರದಿ ವಾಚಿಸಿದರು. ಕೋಶಾಽಕಾರಿ ವೈ ಕಿಶೋರ್ ಆಚಾರ್ಯ ಆಯ ವ್ಯಯ ಮಂಡಿಸಿದರು. ಸಂಘಟನಾ ಕಾರ್ಯದರ್ಶಿ ವೈ. ವಿಜಯ ಆಚಾರ್ಯ ಉಚ್ಚಿಲ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಂಚುಗರ ಕೇರಿ: ಎಲ್ಲೂರು ವಿಶ್ವಕರ್ಮ ಸಂಘದ ವಿಶ್ವಕರ್ಮ ಪೂಜೆ
ಪಡುಬಿದ್ರಿ, ವಿಶ್ವಕರ್ಮ ಸಮಾಜ ಸೇವಾ ಸಂಘ ರಿ. ಎಲ್ಲೂರು ವತಿಯಿಂದ ಶ್ರೀ ವಿಶ್ವಕರ್ಮ ಪೂಜೆಯು ಉದಯ ಪುರೋಹಿತ್ ಪೌರೋಹಿತ್ಯದಲ್ಲಿ ಎಲ್ಲೂರು ಕಂಚುಗರ ಕೇರಿಯ ಸ್ವಂತ ನಿವೇಶನದಲ್ಲಿ ಜ.೩೧ರಂದು ಜರಗಿತು.
ಈ ಸಂದರ್ಭ ಸಂಘದ ಗೌರವಾಧ್ಯಕ್ಷ ವೈ. ರಾಘವೇಂದ್ರ ಆಚಾರ್ಯ, ಅಧ್ಯಕ್ಷ ವೈ ಸತೀಶ ಎಂ ಆಚಾರ್ಯ, ಕಾರ್ಯದರ್ಶಿ ವೈ. ಪ್ರಶಾಂತ್ ಆಚಾರ್ಯ, ಕೋಶಾಽಕಾರಿ ವೈ. ಕಿಶೋರ್ ಆಚಾರ್ಯ, ಗೌರವ ಸಲಹೆಗಾರ ವೈ. ವಾಸುದೇವ ಆಚಾರ್ಯ, ಪದಾಽಕಾರಿಗಳು, ಸದಸ್ಯರು, ಸಮಾಜ ಬಾಂಧವರು ಪಾಲ್ಗೊಂಡಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…