ಮೂಡುಬಿದಿರೆ: ಬಿಜೆಪಿಯಲ್ಲೀಗ ಸಂಘಟನಾ ಪರ್ವ ನಡೆದಿದೆ. ಎಲ್ಲೆಡೆ ಪಕ್ಷವನ್ನು ಸಂಘಟಿಸಿ ಬಲಿಷ್ಠಗೊಳಿಸುವ ಕಾರ್ಯದಲ್ಲಿ ಯಶಸ್ಸು ಕಾಣಬೇಕಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಕಾರ್ಕಳಕ್ಕೆ ತೆರಳುವ ಹಾದಿಯಲ್ಲಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಮೂಡುಬಿದಿರೆಗೆ ಭೇಟಿ ನೀಡಿ ಇಲ್ಲಿನ ಹಳೆ ಪೋಲೀಸ್ ಠಾಣೆಯ ಬಳಿ ಪಕ್ಷದ ಪ್ರಮುಖರಿಂದ ಸ್ವಾಗತ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆರೋಪಗಳು ಬಂದಾಗ ಅವುಗಳನ್ನು ಎದುರಿಸಬೇಕು. ಕಾನೂನಿಗೆ, ನ್ಯಾಯಾಲಯಕ್ಕೆ, ಸಂವಿಧಾನಕ್ಕೆ ಗೌರವ ಕೊಡಬೇಕೇ ಹೊರತು ಬೀದಿಯಲ್ಲಿ ನಿಂತು ಹೋರಾಟ ಮಾಡುವುದಲ್ಲ ಎಂದು ಡಿಕೆಶಿ ಪ್ರಕರಣಕ್ಕೆ ಸಂಬಂಧಿಸಿ ಅವರು ಹೇಳಿದರು.
ರಾಜ್ಯ ಸರ್ಕಾರ ನೆರೆ ನಿರಾಶ್ರಿತರಿಗೆ ಅತ್ಯುತ್ತಮ ಪರಿಹಾರ ನೀಡಲಿದೆ ಎಂದು ಪ್ರತಿಕ್ರಿಯಿಸಿದ ಅವರು ಸಂಸದರಾಗಿ ಪಕ್ಷ ಸಂಘಟನೆಯ ಜವಾಬ್ದಾರಿಯ ಸವಾಲನ್ನು ಸ್ವೀಕರಿಸಿ ಅಭಿವೃದ್ಧಿಗೆ ಶ್ರಮಿಸುವ ವಿಶ್ವಾಸವಿದೆ ಎಂದರು.
ಪಕ್ಷದ ಪ್ರಮುಖರಾದ ಕೆ.ಪಿ.ಜಗದೀಶ ಅಧಿಕಾರಿ, ಸುದರ್ಶನ ಎಂ, ಬಾಹುಬಲಿ ಪ್ರಸಾದ್, ಕೆ.ಕೃಷ್ಣರಾಜ ಹೆಗ್ಡೆ, ಶಾಂತಿ ಪ್ರಸಾದ್ ಹೆಗ್ಡೆ ರಾಜೇಶ್ ಮಲ್ಯ, ಪುರಸಭಾ ಚುನಾಯಿತ ಪ್ರತಿನಿಧಿಗಳು ಹಾಜರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…