ಮೂಡುಬಿದಿರೆ: ಬಿಜೆಪಿಯಲ್ಲೀಗ ಸಂಘಟನಾ ಪರ್ವ ನಡೆದಿದೆ. ಎಲ್ಲೆಡೆ ಪಕ್ಷವನ್ನು ಸಂಘಟಿಸಿ ಬಲಿಷ್ಠಗೊಳಿಸುವ ಕಾರ್ಯದಲ್ಲಿ ಯಶಸ್ಸು ಕಾಣಬೇಕಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಕಾರ್ಕಳಕ್ಕೆ ತೆರಳುವ ಹಾದಿಯಲ್ಲಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಮೂಡುಬಿದಿರೆಗೆ ಭೇಟಿ ನೀಡಿ ಇಲ್ಲಿನ ಹಳೆ ಪೋಲೀಸ್ ಠಾಣೆಯ ಬಳಿ ಪಕ್ಷದ ಪ್ರಮುಖರಿಂದ ಸ್ವಾಗತ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆರೋಪಗಳು ಬಂದಾಗ ಅವುಗಳನ್ನು ಎದುರಿಸಬೇಕು. ಕಾನೂನಿಗೆ, ನ್ಯಾಯಾಲಯಕ್ಕೆ, ಸಂವಿಧಾನಕ್ಕೆ ಗೌರವ ಕೊಡಬೇಕೇ ಹೊರತು ಬೀದಿಯಲ್ಲಿ ನಿಂತು ಹೋರಾಟ ಮಾಡುವುದಲ್ಲ ಎಂದು ಡಿಕೆಶಿ ಪ್ರಕರಣಕ್ಕೆ ಸಂಬಂಧಿಸಿ ಅವರು ಹೇಳಿದರು.
ರಾಜ್ಯ ಸರ್ಕಾರ ನೆರೆ ನಿರಾಶ್ರಿತರಿಗೆ ಅತ್ಯುತ್ತಮ ಪರಿಹಾರ ನೀಡಲಿದೆ ಎಂದು ಪ್ರತಿಕ್ರಿಯಿಸಿದ ಅವರು ಸಂಸದರಾಗಿ ಪಕ್ಷ ಸಂಘಟನೆಯ ಜವಾಬ್ದಾರಿಯ ಸವಾಲನ್ನು ಸ್ವೀಕರಿಸಿ ಅಭಿವೃದ್ಧಿಗೆ ಶ್ರಮಿಸುವ ವಿಶ್ವಾಸವಿದೆ ಎಂದರು.
ಪಕ್ಷದ ಪ್ರಮುಖರಾದ ಕೆ.ಪಿ.ಜಗದೀಶ ಅಧಿಕಾರಿ, ಸುದರ್ಶನ ಎಂ, ಬಾಹುಬಲಿ ಪ್ರಸಾದ್, ಕೆ.ಕೃಷ್ಣರಾಜ ಹೆಗ್ಡೆ, ಶಾಂತಿ ಪ್ರಸಾದ್ ಹೆಗ್ಡೆ ರಾಜೇಶ್ ಮಲ್ಯ, ಪುರಸಭಾ ಚುನಾಯಿತ ಪ್ರತಿನಿಧಿಗಳು ಹಾಜರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…