ಮೂಡುಬಿದಿರೆ: ಬಿಜೆಪಿಯಲ್ಲೀಗ ಸಂಘಟನಾ ಪರ್ವ ನಡೆದಿದೆ. ಎಲ್ಲೆಡೆ ಪಕ್ಷವನ್ನು ಸಂಘಟಿಸಿ ಬಲಿಷ್ಠಗೊಳಿಸುವ ಕಾರ್ಯದಲ್ಲಿ ಯಶಸ್ಸು ಕಾಣಬೇಕಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಕಾರ್ಕಳಕ್ಕೆ ತೆರಳುವ ಹಾದಿಯಲ್ಲಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಮೂಡುಬಿದಿರೆಗೆ ಭೇಟಿ ನೀಡಿ ಇಲ್ಲಿನ ಹಳೆ ಪೋಲೀಸ್ ಠಾಣೆಯ ಬಳಿ ಪಕ್ಷದ ಪ್ರಮುಖರಿಂದ ಸ್ವಾಗತ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆರೋಪಗಳು ಬಂದಾಗ ಅವುಗಳನ್ನು ಎದುರಿಸಬೇಕು. ಕಾನೂನಿಗೆ, ನ್ಯಾಯಾಲಯಕ್ಕೆ, ಸಂವಿಧಾನಕ್ಕೆ ಗೌರವ ಕೊಡಬೇಕೇ ಹೊರತು ಬೀದಿಯಲ್ಲಿ ನಿಂತು ಹೋರಾಟ ಮಾಡುವುದಲ್ಲ ಎಂದು ಡಿಕೆಶಿ ಪ್ರಕರಣಕ್ಕೆ ಸಂಬಂಧಿಸಿ ಅವರು ಹೇಳಿದರು.
ರಾಜ್ಯ ಸರ್ಕಾರ ನೆರೆ ನಿರಾಶ್ರಿತರಿಗೆ ಅತ್ಯುತ್ತಮ ಪರಿಹಾರ ನೀಡಲಿದೆ ಎಂದು ಪ್ರತಿಕ್ರಿಯಿಸಿದ ಅವರು ಸಂಸದರಾಗಿ ಪಕ್ಷ ಸಂಘಟನೆಯ ಜವಾಬ್ದಾರಿಯ ಸವಾಲನ್ನು ಸ್ವೀಕರಿಸಿ ಅಭಿವೃದ್ಧಿಗೆ ಶ್ರಮಿಸುವ ವಿಶ್ವಾಸವಿದೆ ಎಂದರು.
ಪಕ್ಷದ ಪ್ರಮುಖರಾದ ಕೆ.ಪಿ.ಜಗದೀಶ ಅಧಿಕಾರಿ, ಸುದರ್ಶನ ಎಂ, ಬಾಹುಬಲಿ ಪ್ರಸಾದ್, ಕೆ.ಕೃಷ್ಣರಾಜ ಹೆಗ್ಡೆ, ಶಾಂತಿ ಪ್ರಸಾದ್ ಹೆಗ್ಡೆ ರಾಜೇಶ್ ಮಲ್ಯ, ಪುರಸಭಾ ಚುನಾಯಿತ ಪ್ರತಿನಿಧಿಗಳು ಹಾಜರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…