ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮೇಲೆ ಹಾಗೂ ನನ್ನ ಮೇಲೆ ಗೌರವ ಇದ್ದರೆ 24 ರಿಂದ 48 ಗಂಟೆಗಳಲ್ಲಿ ಬಂದು ಶರಣಾಗು. ಬಂದು ತನಿಖೆ ಎದುರಿಸು ಎಂದು ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ನಗರದ ಜೆಡಿಎಸ್ ಕಛೇರಿಯ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾಕೆ ಹೆದರಬೇಕು. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ. ಮೇಲೆ ಪಕ್ಷ ಬೆಳೆದಿದೆ. ಅವರ ಆಶೀರ್ವಾದದಿಂದ ಬೆಳೆದಿದ್ದೇವೆ. ಎಷ್ಟು ದಿನ ಕಳ್ಳ ಪೊಲೀಸ್ ಆಟ. ದೇವೇಗೌಡರಿಗೆ ಮನವಿ ಮಾಡಿ ಅಂತ ಹೇಳಿದ್ದೆ. ಆದರೆ ಈಗ ನಾನೇ ಮನವಿ ಮಾಡ್ತೀನಿ. ಎಲ್ಲೇ ಇದ್ದರೂ ವಾಪಸ್ ಬಂದು ತನಿಖೆಗೆ ಸಹಕಾರ ನೀಡುವಂತೆ ಪ್ರಜ್ವಲ್ ಗೆ ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದರು.
ಪದ್ಮನಾಭ ನಗರಕ್ಕೆ ನಾನು ಪ್ರಜ್ವಲ್ ನನ್ನು ಬಿಡಿಸಲು ತಂದೆಯೊಂದಿಗೆ ಮಾತನಾಡಲು ಹೋಗಿಲ್ಲ. ತಂದೆ- ತಾಯಿ ಅವರ ಆರೋಗ್ಯ ವಿಚಾರಿಸಲು ಮತ್ತು ಧೈರ್ಯ ಹೇಳಲು ತೆರಳಿದ್ದೆ. ಇನ್ನು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಎಲ್ಲರೂ ತಲೆ ತಗ್ಗಿಸುವಂತದ್ದು. ಹೀಗಾಗಿ ನಾನು ಬಹಿರಂಗವಾಗಿ ಮತ್ತೊಮ್ಮೆ ಕ್ಷಮೆಯಾಚಿಸುತ್ತೇನೆ. ಎಲ್ಲರೂ ಅಸಹ್ಯ ಪಡುವಂತಹ ಪ್ರಕರಣ ಇದಾಗಿದ್ದು, ಇದರಲ್ಲಿ ನನ್ನ ಹಾಗೂ ದೇವೇಗೌಡರನ್ನು ತಾಲೆ ಹಾಕಿದ್ದಾರೆ ಎಂದು ಹೇಳಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…