ಬಿಜಾಪುರ: ಕೆಲವು ಮುಸ್ಲಿಮರು ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ ಎಂಬುವುದರ ಕುರಿತಾದಂತೆ ಮಾತನಾಡಿದ ಅಹ್ಲೆ ಸುನ್ನತ್ ಜಮಾತ್ ಅಧ್ಯಕ್ಷ ಹಾಗೂ ಮುಸ್ಲಿಂ ವಿದ್ವಾಂಸ ಸೈಯದ್ ತನ್ವೀರ್ ಹಾಶ್ಮಿ, “ಎಲ್ಲರೂ ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಮತ್ತು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ” ಎಂದು ಕರೆ ನೀಡಿದ್ದಾರೆ.
“ಕೆಲವು ವ್ಯಕ್ತಿಗಳು ಕೋವಿಡ್ ಲಸಿಕೆಯ ಕುರಿತಾದಂತೆ ವದಂತಿಗಳನ್ನು ಹಬ್ಬುತ್ತಿದ್ದಾರೆ. ಈ ವದಂತಿಗಳಿಗೆ ಹಲವು ಮುಸಿಮರು ಬಲಿ ಬೀಳುತ್ತಿದ್ದಾರೆ” ಎಂದು ಅವರು ಹೇಳಿದರು.
ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಕೂಡಾ ಆಗದು : ಸಿ.ಟಿ.ರವಿ – Vishwanews24
“ವಿಜ್ಞಾನಿಗಳು ಮುಸ್ಲಿಮರಿಗೆ ಬೇರೆ, ಮುಸ್ಲಿಮೇತರರಿಗೆ ಬೇರೆ ಎಂಬಂತೆ ಲಸಿಕೆಗಳನ್ನು ತಯಾರಿಸಲಿಲ್ಲ. ಮುಸ್ಲಿಮರು ಲಸಿಕೆ ಹಾಕಿಸಿಕೊಳ್ಳದೆ ಇರಲಿ ಎಂಬ ಕಾರಣದಿಂದ ಯಾರೋ ಕಿಡಿಗೇಡಿಗಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ನಮ್ಮದೇ ಸಮುದಾಯದ ಹಲವು ಮಂದಿ ಈ ಕುರಿತಾದಂತೆ ವದಂತಿಗಳನ್ನು ಹಬ್ಬಿಸಿ ಜನರನ್ನು ಭಯಭೀತರನ್ನಾಗಿಸುತ್ತಿದ್ದಾರೆ” ಎಂದು ಅವರು ಹೇಳಿದರು.
“ತಜ್ಞರ ಪ್ರಕಾರ, ಯಾರೆಲ್ಲಾ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆಯೋ, ಅವರಲ್ಲಿ ಬಹುತೇಕರಿಗೆ ಕೋವಿಡ್ ಸೋಂಕು ಉಂಟಾಗಿಲ್ಲ. ಒಂದು ವೇಳೆ ಲಸಿಕೆ ಪಡೆದ ಬಳಿಕವೂ ಸೋಂಕು ಕಂಡು ಬಂದರೆ ಅದು ತೀವ್ರ ಪ್ರಮಾಣದಲ್ಲಿರುವುದಿಲ್ಲ ಮತ್ತು ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ಎದುರಾಗುವುದಿಲ್ಲ. ಲಸಿಕೆ ಪಡೆದುಕೊಳ್ಳುವುದು ಸದ್ಯದ ಪರಿಸ್ಥಿತಿಯಲ್ಲಿ ಜೀವ ಉಳಿಸುವುದಕ್ಕಿರುವ ಮಾರ್ಗ” ಎಂದು ವೈದ್ಯರು ಹೇಳಿಕೆ ನೀಡಿದ್ದಾಗಿ ಅವರು ತಿಳಿಸಿದ್ದಾರೆ.
ಕೋವಿಡ್ ಸಂಕಷ್ಟ : ಭಾರತಕ್ಕೆ ಸಹಾಯಕ್ಕೆ ಧಾವಿಸಿದ ಅಮೆರಿಕ, ಇಂಗ್ಲೆಂಡ್ -Vishwanews24
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…