Featured

ಎಲ್ಲ ರೀತಿಯ ಧಾರ್ಮಿಕ ಆಚರಣೆಗಳು ಮಂದಿರ ಮತ್ತು ಮಸೀದಿಗಳ ಒಳಗಿರಲಿ, ರಸ್ತೆಯಲ್ಲಿ ಬೇಡ : ಅಲಿಗಢ ಜಿಲ್ಲಾಡಳಿತ -Vishwanews24

ಲಖನೌ: ರಸ್ತೆಗಳಲ್ಲಿ ನಮಾಜ್, ಹನುಮಾನ್‌ ಚಾಲಿಸಾ ಪಠನ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಅಲಿಗಢ ಜಿಲ್ಲಾಡಳಿತ ಖಡಕ್‌ ಕ್ರಮಕ್ಕೆ ಮುಂದಾಗಿದೆ.

ಮುಸ್ಲಿಂ ಸಮುದಾಯದವರು ಶುಕ್ರವಾರಗಳಂದು ನಮಾಜ್‌ ಮಾಡುವ ವೇಳೆ ರಸ್ತೆಗಳಲ್ಲಿ ಜನಸಂದಣಿ ಹೆಚ್ಚಾಗುತ್ತಿತ್ತು. ಇದಕ್ಕೆ ಪ್ರತಿಯಾಗಿ ಕೆಲವು ಸಂಘಟನೆಗಳು ಮಂಗಳವಾರದಂದು ಹನುಮಾನ್‌ ಚಾಲಿಸಾ ಪಠನೆ ಹಾಗೂ ಆರತಿಯನ್ನು ಕೂಡ ರಸ್ತೆಗಳಲ್ಲಿ ಮಾಡಲು ಆರಂಭಿಸಿ ಜನಸಾಮಾನ್ಯರಿಗೆ ಹೆಚ್ಚಿನ ತೊಂದರೆ ನೀಡುತ್ತಿವೆ ಎಂದು ಜಿಲ್ಲಾ ಮ್ಯಾಜಿಸ್ಪ್ರೇಟ್‌ಗೆ ಜಿಲ್ಲಾಡಳಿತ ವರದಿ ನೀಡಿ ಕ್ರಮಕ್ಕೆ ಮನವಿ ಮಾಡಿತ್ತು.

ಎರಡು ಸಮುದಾಯಗಳ ಸಂಘಟನೆಗಳನ್ನು ಕರೆಸಿ ಸಭೆ ನಡೆಸಿದ ಮ್ಯಾಜಿಸ್ಪ್ರೇಟ್‌ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳನ್ನು ಮಂದಿರ ಮತ್ತು ಮಸೀದಿಗಳ ಒಳಗೆ ಮಾತ್ರ ನಿಗದಿಪಡಿಸಿ. ರಸ್ತೆಗಳಿಗೆ ಅದನ್ನು ತರಬೇಡಿ. ಜನಸಾಮಾನ್ಯರ ಸಂಚಾರಕ್ಕೆ ಅಡ್ಡಿಯಾಗುವುದು ಬೇಡ ಎಂದು ನಿರ್ದೇಶನ ನೀಡಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಆಚರಣೆಗಳಿಂದ ಜನಸಾಮಾನ್ಯರಿಗೆ ಅನನುಕೂಲವಾಗದಂತೆ ಎಚ್ಚರವಹಿಸಿ ಎಂದು ಜಿಲ್ಲಾಡಳಿತ ಧಾರ್ಮಿಕ ಮುಖಂಡರಿಗೆ ಖಡಕ್‌ ಆದೇಶ ನೀಡಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

13 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

13 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

14 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

14 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

14 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

15 hours ago