ಎಲ್ಲ ವರ್ಗದವರನ್ನ ಸಮಾನವಾಗಿ ತೆಗೆದುಕೊಂಡು ಹೋದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ : ಡಿಕೆಶಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಗೆ ಇರೋ ಇತಿಹಾಸ ಬೇರೆ ಪಕ್ಷಗಳಿಗೆ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎಲ್ಲ ಜಾತಿಗಳು ಅಧಿಕಾರಕ್ಕೆ ಬರ್ತಾವೆ. ಪಕ್ಷ ಅಧಿಕಾರಕ್ಕೆ ಬರಲ್ಲ ಅಂತ ಚಿಂತೆ ಮಾಡಬೇಡಿ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿವಕುಮಾರ್ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

ಇಂದಿರಾಗಾಂಧಿ ಪುಣ್ಯತೀಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಈಗ ಜಾತಿ ಮತ್ತು ಸಮಾಜದ ಮೇಲೆ ರಾಜಕಾರಣ ನಡೆಯುತ್ತಿದೆ ಅಂತ ಹೇಳುತ್ತಾರೆ. ಆದರೇ  ಕಾರ್ಯಕರ್ತರು ಸ್ಥಳೀಯ  ಮಟ್ಟದಲ್ಲಿ  ಹೆಚ್ಚಿನ ಕೆಲಸ ಮಾಡಬೇಕು. ಎಲ್ಲ ವರ್ಗದವರನ್ನ ಸಮಾನವಾಗಿ ತೆಗೆದುಕೊಂಡು ಹೋದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸಮ್ಮಿಶ್ರ ಸರ್ಕಾರ ರಚನೆ ಆಗುತ್ತೆ ಅಂತ ಹೇಳುತ್ತಿದ್ದರು.  ಕಾಂಗ್ರೆಸ್ ಬರೀ 7 -8 ಸ್ಥಾನ ಬರುತ್ತೆ ಅಂತ ಕೂಡ ಹೇಳಿದ್ದರು. ಅದರೆ  ಮತದಾರನ ನಿರ್ಧಾರವೇ ಬೇರೆ ಆಗಿತ್ತು. ಯುವ ಜನತೆ ಈ ಸಂದರ್ಭದಲ್ಲಿ ಎಚ್ಚೇತ್ತುಕೊಳ್ಳಬೇಕಾಗಿದೆ. ಅಧುನಿಕ ಮಾಧ್ಯಮಗಳಿಗೆ ಹೊಂದಿಕೊಳ್ಳಬೇಕು. ಸಣ್ಣಪುಟ್ಟ ವ್ಯತ್ಯಾಸಗಳು ಬರಬಹುದು. ಆದ್ರೆ ಎಲ್ಲರೂ ಒಂದಾಗಿ ಹೋಗಬೇಕಿದೆ ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ.