ಬೆಂಗಳೂರು: ಎಲ್ಲ ಶಾಸಕರು ಒಂದು ತಿಂಗಳ ವೇತನವನ್ನು ರೈತರ ಸಾಲಮನ್ನಾ ನಿಧಿಗೆ ಕೊಡಬೇಕು. ನಾನು ನನ್ನ ಒಂದು ತಿಂಗಳ ವೇತನ ಕೊಡುತ್ತೇನೆ ಎಂದು ಶಾಸಕ ಬಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿ, ಕಳೆದ ವರ್ಷ ಉಳಿದ ಶಾಸಕರ ಪ್ರದೇಶಾಭಿವೃದ್ಧಿ ಹಣವನ್ನು ರೈತರ ಸಾಲ ಮನ್ನಾಕ್ಕೆ ಬಳಸಲಿ. ರೈತರಿಗೆ ತ್ಯಾಗ ಮಾಡಿದರೆ ತಪ್ಪೇನಿಲ್ಲ ಎಂದರು.
6ನೇ ವೇತನ ಆಯೋಗದ ವರದಿಯನ್ನ ಜಾರಿಗೆ ತಂದಿದ್ದು, ನನ್ನನ್ನೂ ಸೇರಿಸಿ ಸರ್ಕಾರದ ಎಲ್ಲ ಇಲಾಖೆ ನೌಕರರು ಒಂದು ತಿಂಗಳ ವೇತನವನ್ನು ಸರ್ಕಾರಕ್ಕೆ ನೀಡಲಿ. ರೈತರ ಸಾಲಮನ್ನಾಗೆ ಅದು ಬಳಕೆಯಾಗಲಿ ಎಂದರು.
ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಿ
ಹಳ್ಳಿಗಳ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮ ಆರಂಭಿಸಿ. ಆಗ ಹಳ್ಳಿಗಳಲ್ಲಿ ಶಾಲೆಗಳ ಹಾಜರಾತಿ ಸಂಖ್ಯೆ ಹೆಚ್ಚಾಗುತ್ತದೆ. ಇಲ್ಲವಾದರೆ ಮಕ್ಕಳನ್ನು ಕಾನ್ವೆಂಟ್ಗಳಿಗೆ ಸೇರಿಸುತ್ತಾರೆ. ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…