ಬೆಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗಧಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದ್ದು, ಸಾರ್ವಜನಿಕರು ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ.
ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ ಹಾಗೂ ಸಿಲಿಂಡರ್ನ್ನು ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿರುತ್ತದೆ. ಅಲ್ಲದೇ ಹೆಲೋ ಬಿಪಿಸಿಎಲ್, ಇಂಡಿಯನ್ ಆಯ್ಲ್ ಒನ್ ಮತ್ತು ವಿಟ್ರನ್ ಹೆಚ್ಪಿ ಗ್ಯಾಸ್ ಈ ಮೊಬೈಲ್ ಆಪ್ಗಳ ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಅವಿನ್ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…