ಕಠ್ಮಂಡು : ಸಿಂಗಾಪುರ, ಹಾಂಕಾಂಗ್ ದೇಶಗಳು ಭಾರತ ಮೂಲದ ಎವರೆಸ್ಟ್ ಮತ್ತು ಎಂಡಿಎಚ್ ಮಸಾಲೆಗಳಲ್ಲಿ ಹಾನಿಕಾರಕ , ರಾಸಾಯಾನಿಕ ಅಂಶಗಳಿವೆ ಎನ್ನುವ ಕಾರಣಕ್ಕೆ ನಿಷೇಧಿಸಿದ ಬೆನ್ನಲ್ಲೇ ಇದೀಗ ನೇಪಾಳದಲ್ಲಿ ಸುರಕ್ಷತೆಯ ಕಾರಣ ನೀಡಿ ಎವರೆಸ್ಟ್ ಮತ್ತು ಎಂಡಿಎಚ್ ಮಸಾಲೆಯನ್ನು ನಿಷೇಧಿಸಲಾಗಿದೆ.
ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟದ ಇಲಾಖೆಯು ಭಾರತೀಯ ಎರಡು ಬ್ರ್ಯಾಂಡ್ ಮಸಾಲ ಪದಾರ್ಥಗಳನ್ನು ಕ್ಯಾನ್ಸರ್ ಉಂಟು ಮಾಡುವ ಕೀಟನಾಶಕ ಎಥೀಲಿನ್ ಆಕ್ಸೈಡ್ ಇದೆಯೇ ಎನ್ನುವುದರ ಬಗ್ಗೆ ಪರೀಕ್ಷೆ ನಡೆಸುತ್ತಿದ್ದು, ಅಂತಿಮ ಫಲಿತಾಂಶ ಬರುವ ತನಕ ಎವರೆಸ್ಟ್, ಎಂಡಿಎಚ್ ಮಸಾಲೆಗಳ ಮಾರಾಟ ಹಾಗೂ ಅಮದನ್ನು ನಿಷೇಧಿಸಿದೆ.
‘ಎವರೆಸ್ಟ್ ಮತ್ತು ಎಂಡಿಎಚ್ ಮಸಾಲೆಗಳನ್ನು ಅಮದು ಹಾಗೂ ಪೇಟೆಯಲ್ಲಿ ಮಾರಾಟ ಮಾಡುವುದನ್ನು ಸಹ ನಿಷೇಧಿಸಿದ್ದೇವೆ. ಅವುಗಳಲ್ಲಿ ಹಾನಿಕಾರಕ ರಾಸಾಯನಿಕ ಅಂಶವಿದೆ ಎನ್ನುವ ಸುದ್ದಿ ಬಂದ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಅಂತಿಮ ಫಲಿತಾಂಶ ಬರುವ ತನಕ ಈ ಕ್ರಮ ಜಾರಿಯಲ್ಲಿರಲಿದೆ’ ಎಂದು ನೇಪಾಳದ ಆಹಾರ ತಂತ್ರಜ್ಙಾನದ ವಕ್ತಾರ ಮೋಹನ್ ಕೃಷ್ಣ ಮಹಾರಾಜನ್ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…