Featured

ಎಷ್ಟೇ ಕಷ್ಟ ಎದುರಾದರೂ ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡಲು ಕಾಂಗ್ರೆಸ್ ಪಕ್ಷ ಮತ್ತು ಅದರ ಘಟಕಗಳು ಶ್ರಮಿಸಲಿವೆ : ಡಿ.ಕೆ.ಶಿ – Vishwanews24

ಎಷ್ಟೇ ಕಷ್ಟ ಎದುರಾದರೂ ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡಲು ಕಾಂಗ್ರೆಸ್ ಪಕ್ಷ ಮತ್ತು ಅದರ ಘಟಕಗಳು ಶ್ರಮಿಸಲಿವೆ : ಡಿ.ಕೆ.ಶಿ – Vishwanews24

ಬೆಂಗಳೂರು: ‘ಎಷ್ಟೇ ಕಷ್ಟ ಎದುರಾದರೂ ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡಲು ಕಾಂಗ್ರೆಸ್ ಪಕ್ಷ ಮತ್ತು ಅದರ ಘಟಕಗಳು ಶ್ರಮಿಸಲಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕಿಸಾನ್ ಕಾಂಗ್ರೆಸ್, ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್, ಇಂಡಿಯನ್ ಯೂತ್ ಕಾಂಗ್ರೆಸ್, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಮತ್ತು ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾದ ಪ್ರಮುಖ ನಾಯಕರೊಂದಿಗೆ ಸೋಮವಾರ ಸರಣಿ ಸಭೆಗಳನ್ನು ನಡೆಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

‘ಪಕ್ಷದ ವಿವಿಧ ಘಟಕಗಳಾದ ಕಿಸಾನ್ ಕಾಂಗ್ರೆಸ್, ಐಎನ್‌ಟಿಯುಸಿ, ಯೂತ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಮತ್ತು ವಿಧ್ಯಾರ್ಥಿ ಘಟಕ ಎನ್‌ಎಸ್‌ಯುಐ ಸೇರಿದಂತೆ ವಿವಿಧ ಘಟಕಗಳನ್ನು ಪಕ್ಷದ ಉಚಿತ ಲಸಿಕೆ ಅಭಿಯಾನದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವಂತೆ ಸಜ್ಜುಗೊಳಿಸಲಾಗಿದೆ.

ನಾನು ಪಕ್ಷದ ವಿವಿಧ ಘಟಕಗಳ ಮುಂಚೂಣಿ ನಾಯಕರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ವಿನಾಶಕಾರಿ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲು ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸುವಂತೆ ಅವರಿಗೆ ತಿಳಿಸಿದ್ದೇನೆ.

ಬಿಜೆಪಿ ಸರ್ಕಾರವು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಬಡ ಜನರ ಬಗ್ಗೆ ತೀವ್ರ ನಿರ್ಲಕ್ಷ್ಯ ತೋರುತ್ತಾ ಅವರಿಗೆ ಸ್ಪಂದಿಸುವುದನ್ನೇ ಮರೆತಿದೆ.

ಕರ್ನಾಟಕ ಕಾಂಗ್ರೆಸ್ ಈಗಾಗಲೇ ರಾಜ್ಯಾದ್ಯಂತ 172ಕ್ಕೂ ಹೆಚ್ಚು ಆಂಬುಲೆನ್ಸ್ ಗಳನ್ನೂ ಕೋವಿಡ್ ಕೇರ್ಸ್ ಅಭಿಯಾನದಡಿಯಲ್ಲಿ ಸೇವೆ ಸಲ್ಲಿಸಲಾಗುತ್ತಿದೆ. ಅಲ್ಲದೆ ಈಗಾಗಲೇ 3 ಲಕ್ಷ ಜನರಿಗೆ ಲಸಿಕೆ ಹಾಕುವ ಯೋಜನೆಗೆ ಚಾಲನೆ ನೀಡಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಜನರಿಗೆ ಲಸಿಕೆ ನೀಡಲು ತಮ್ಮ ಸ್ವಂತ ಹಣ ಖರ್ಚು ಮಾಡಿ ಲಸಿಕೆಗಳನ್ನು ಸಂಗ್ರಹಿಸುತ್ತಿದ್ದಾರೆ. ಅಲ್ಲದೆ ಸಮಾಜದ ಎಲ್ಲಾ ವರ್ಗಗಳನ್ನು ತಲುಪಲು ಹಳ್ಳಿಗಳಲ್ಲಿ ಮತ್ತು ತಾಲ್ಲೂಕುಗಳಲ್ಲಿ ಉಚಿತ ಶಿಬಿರಗಳನ್ನು ಆಯೋಜಿಸುತ್ತಿದ್ದೇವೆ.

ಅತ್ತ ಬಿಜೆಪಿ ಸಂಸದರು ಮತ್ತು ಶಾಸಕರು ಪ್ರತಿ ಲಸಿಕೆಗೆ 700 ರೂ. ಪಡೆಯುವ ಮೂಲಕ ಜನರನ್ನು ಲೂಟಿ ಮಾಡುತ್ತಿದ್ದಾರೆ, ಆದರೆ ನಮ್ಮ ಕಾಂಗ್ರೆಸ್ ಪಕ್ಷವು ಜನರ ಬಗ್ಗೆ ನೈಜ ಕಾಳಜಿ ವಹಿಸಿದೆ. ಹಾಗಾಗಿ ಕಾಂಗ್ರೆಸ್ ಪಕ್ಷವು ₹100 ಕೋಟಿ ಕಾರ್ಯಕ್ರಮ ಮೂಲಕ ಲಸಿಕೆಗಳನ್ನು ಖರೀದಿಸಲು ಮುಂದಾಗಿದ್ದು ಪಕ್ಷದ ವತಿಯಿಂದ 10 ಕೋಟಿ ರೂ. ಮತ್ತು ಶಾಸಕರ ಮತ್ತು ಸಂಸದರ ನಿಧಿಯಿಂದ 90 ಕೋಟಿ ರೂ. ನೀಡಲು ತಯಾರಿದೆ ಆದರೆ ಸರ್ಕಾರ ಇದಕ್ಕೆ ಅನುಮತಿ ನೀಡುತ್ತಿಲ್ಲ.’

ಇದೇ ವೇಳೆ ‘ಸಂಜೀವನಿ’ ಯೋಜನೆ ಅಡಿಯಲ್ಲಿ ಆಮ್ಲಜನಕ ಸೌಲಭ್ಯವುಳ್ಳ ಮೂರು ಆಂಬುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಿದರು. ಜತೆಗೆ ಸುಮಾರು ಐದು ನೂರಕ್ಕೂ ಹೆಚ್ಚು ಕೋವಿಡ್ ಪೀಡಿತ ಕುಟುಂಬಗಳಿಗೆ ಉಚಿತ ಪಡಿತರ ಕಿಟ್‌ಗಳನ್ನು ವಿತರಿಸಿದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago