ಬೆಂಗಳೂರು: ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಅವರಿಗೆ ಸಿಬಿಐ ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಸಿಬಿಐ ತನಿಖೆಗೆ ಕೇಳುತ್ತಾರೆ. ವರ್ಷಗಳ ಹಿಂದೆ ಬಿಜೆಪಿ ಕೈಯಲ್ಲಿ ಎಲ್ಲಾ ಸಂಸ್ಥೆಗಳು ಇತ್ತು ಏನ್ ಮಾಡಿದರು? ಬಿಜೆಪಿ ಯಾರದ್ದೋ ತಲೆ ದಂಡ ಆಗುತ್ತೆ ಅಂತ ಕಾಯ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಯಾರ ತಲೆ ತಂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.
ಕಲಬುರಗಿಗೆ ಮುತ್ತಿಗೆ ಹಾಕೋ ಎಚ್ಚರಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಚಿವರು,ಕಲಬುರಗಿಗೆ ಮುತ್ತಿಗೆ ಹಾಕಲಿ ಯಾರು ಬೇಡ ಎಂದಿದ್ದಾರೆ. ನನ್ನ ವಿರುದ್ದ ಏನಾದರೂ ದಾಖಲಾತಿ ಇದ್ದರೆ ತಂದು ಕೊಡಿ. ನಿಮಗೆ ನಾಚಿಕೆ ಆಗಬೇಕು. ಯಾಕೆ ಕಲಬುರಗಿಗೆ ಮುತ್ತಿಗೆ ಹಾಕ್ತಾರೆ ಎಂದು ಪ್ರಶ್ನಿಸಿದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…