ಯಾದಗಿರಿ:ಪಕ್ಷದಿಂದ ನೀಡಿದ ಶೋಕಾಸ್ ನೋಟಿಸ್ ಗೆ ಉತ್ತರಿಸದ ಶಾಸಕ ಬಸನಗೌಡ ಫಾಟೀಲ್ ಯತ್ನಾಳ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಶೋಕಾಸ್ ನೋಟಿಸ್ ನೀಡಿದರೆ ಉತ್ತರ ಕೊಡುವುದು ಅವರ ಜವಾಬ್ದಾರಿಯಾಗಿರುತ್ತದೆ. ಉತ್ತರ ಕೊಡದೇ ಹೋದರೆ ಅದು ಅಹಂಕಾರವಾಗುತ್ತದೆ. ಪಕ್ಷಕ್ಕೆ ಅವರದ್ದೇ ಆದ ನೀತಿ, ಚೌಕಟ್ಟಿದೆ. ಎಷ್ಟೇ ದೊಡ್ಡ ವ್ಯಕ್ತಿ ಆದರೂ ಪಕ್ಷಕ್ಕೆ ಸಾಮಾನ್ಯ ಕಾರ್ಯಕರ್ತ ಎಂದು ಹೇಳಿದ್ದಾರೆ.
ನಾನು ರಾಜ್ಯದ್ಯಕ್ಷ. ಆದರೆ ನನ್ನಿಂದ ತಪ್ಪು ನಡೆದರೆ ವಿವರಣೆ ಕೇಳಿದಾಗ ವಿವರಣೆ ಕೊಡೋದು ನನ್ನ ಜವಾಬ್ದಾರಿ. ವ್ಯತ್ಯಾಸ ಇದ್ದರೆ ಹಿರಿಯರ ಜೊತೆ ಮಾತಾಡೋಣ ಅದರಲ್ಲಿ ಏನು ತಪ್ಪಿದೆ. ವಿವರಣೆ ಕೇಳಿದ ಉತ್ತರ ಕೊಡೋದು ಜವಾಬ್ದಾರಿಯಾಗುತ್ತದೆ. ಉತ್ತರ ಕೊಡದೆ ಹೊದರೆ ಅದು ಅಹಂಕಾರವಾಗುತ್ತದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…