Featured

ಎಸಿಡಿಟಿ ನಿವಾರಣೆಗೆ ಈ ಮನೆಮದ್ದು ಸಹಕರಿಸುತ್ತದೆ ಉಪಯೋಗಿಸಿ – Vishwanews24

ಅನಿಯಮಿತ ಆಹಾರ ಸೇವನೆ, ಆಹಾರ ಸರಿಯಾಗಿ ಜೀರ್ಣವಾಗದಿರುವುದು, ಸಾಕಷ್ಟು ನೀರು ಸೇವಿಸದಿರುವುದು, ಮಸಾಲೆಯುಕ್ತ ಹಾಗೂ ಜಂಕ್ ಫುಡ್ ಸೇವನೆ, ಒತ್ತಡ, ಧೂಮಪಾನ, ತುಂಬಾ ಹೊತ್ತು ಆಹಾರ ಸೇವಿಸದೆ ಇರೋದು ಎಸಿಡಿಟಿಗೆ ಕಾರಣವಾಗುತ್ತದೆ.ಹೊಟ್ಟೆ ಉರಿ, ಎದೆಯುರಿ, ಹುಳಿ ತೇಗು, ಕಡಿಮೆ ಹಸಿವು, ಹೊಟ್ಟೆ ಉಬ್ಬರ ಇವೆಲ್ಲವೂ ಎಸಿಡಿಟಿಯ ಲಕ್ಷಣವಾಗಿದೆ.

ಹೊಟ್ಟೆ, ಜೀರ್ಣಕ್ರಿಯೆಗೆ ಸಂಬಂಧಿತ ಅನೇಕ ಸಮಸ್ಯೆಗೆ ಮಜ್ಜಿಗೆ ರಾಮಬಾಣ. ಎಸಿಡಿಟಿ ಆಗದಂತೆ ತಡೆಯಲು ಊಟದ ಬಳಿಕ ಮಜ್ಜಿಗೆ ಕುಡಿಯುವ ಪದ್ದತಿ ಈಗಲೂ ಇದೆ. ಎಸಿಡಿಟಿ ಆದಲ್ಲಿ, ತಂಪಾದ ಮಜ್ಜಿಗೆ ನಿಯಮಿತವಾಗಿ ಸೇವಿಸುವುದು ಒಳ್ಳೆಯದು.

ಶುಂಠಿ ರಸಕ್ಕೆ ನಿಂಬೆ ರಸ ಹಾಗೂ ಜೇನು ತುಪ್ಪ ಸೇರಿಸಿ ಕುಡಿಯಿರಿ. ಇದು ಹೊಟ್ಟೆಯುರಿ ಕಡಿಮೆ ಮಾಡಿ ಎಸಿಡಿಟಿ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.

ಅಶ್ವಗಂಧ

ಹೊಟ್ಟೆ ತುಂಬಿದ್ದರೂ ಹೊಟ್ಟೆಯುರಿ ಕಾಡುತ್ತಿದ್ದರೆ ಅಶ್ವಗಂಧವನ್ನು ಸೇವನೆ ಮಾಡಿ. ಇದ್ರಿಂದ ಸಾಕಷ್ಟು ಪ್ರಯೋಜನಗಳಿವೆ.ಹಿಂದಿನವರು ಕೂಡ ಎಸಿಡಿಟಿ ಸಮಸ್ಯೆಗೆ ಚಂದನವನ್ನು ಬಳಸುತ್ತಿದ್ದರು. ಇದು ಹೊಟ್ಟೆಯುರಿ, ಎದೆಯುರಿ, ವಾಕರಿಕೆ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ದೂರ ಮಾಡುತ್ತದೆ.

ತಂಪಾದ ಹಾಲು

ಎಸಿಡಿಟಿ ಈಗಾಗಲೇ ಆರಂಭವಾದರೆ, ತಂಪಾದ ಹಾಲು ತುಂಬಾ ಒಳ್ಳೆಯ ಔಷಧವಾಗಿ ಪರಿಣಮಿಸುತ್ತದೆ. ಹಾಲಿನಲ್ಲಿರುವ ಅಂಶ ಆ್ಯಸಿಡ್‌ ಅಂಶವನ್ನು ಹೀರಿಕೊಳ್ಳುವ ಗುಣಹೊಂದಿದೆ. ಸಕ್ಕರೆ ಅಥವಾ ಇನ್ನಿತರ ಯಾವುದೇ ವಸ್ತುಗಳನ್ನು ಬೆರೆಸದೆ, ತಂಪಾದ ಹಾಲನ್ನು ಕುಡಿಯಿರಿ.

ತುಳಸಿ 
ಜೀರ್ಣಕ್ರಿಯೆಯನ್ನು ಸರಿಪಡಿಸುವಲ್ಲಿ ತುಳಸಿಯನ್ನು ಔಷಧಿ ಎಂದೇ ಪರಿಗಣಿಸಲಾಗುತ್ತದೆ. ಅಷ್ಟು ಮಾತ್ರ ಅಲ್ಲ, ಆಯುರ್ವೇದದಲ್ಲಿ ತುಳಸಿ ರಸ ಔಷಧವೆಂದೇ ಪರಿಗಣಿಸಲಾಗಿದೆ. ತುಳಸಿ ಎಲೆಯನ್ನು ಹಾಗೆಯೇ ತಿನ್ನಬಹುದು, ಅಥವಾ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಿಯೂ ಸೇವಿಸಬಹುದು. ಇದನ್ನು ನಿಮ್ಮ ಊಟದ ಬಳಿಕ ಸೇವಿಸಿದರೆ ಇನ್ನೂ ಒಳ್ಳೆಯದು

ಜೀರಿಗೆ

ಇದಲ್ಲದೆ, ಜೀರಿಗೆಯೂ ಹೊಟ್ಟೆಯ ಸಮಸ್ಯೆಗಳನ್ನು ದೂರವಾಗಿಸಲು ಬಳಸುತ್ತಾರೆ. ಜೀರಿಗೆಯನ್ನು ನೇರ ಬಾಯಿಗೆ ಹಾಕಬಹುದು ಅಥವಾ ಅವನ್ನು ನೀರಿನಲ್ಲಿ ಕುದಿಸಿ, ಬಿಸಿ ನೀರನ್ನೂ ಕುಡಿಯುವುದರಿಂದ ಹೆಚ್ಚು ಅನುಕೂಲವಾಗುತ್ತದೆ.

ಬಾಳೆಹಣ್ಣು 
ಪೊಟ್ಯಾಷಿಯಂ ಅಂಶವನ್ನು ಹೊಂದಿರುವ ಬಾಳೆ ಹಣ್ಣುಗಳು ಹೊಟ್ಟೆಯಲ್ಲಿ ಆ್ಯಸಿಡ್‌ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಉತ್ತಮ ಕೆಲಸ ಮಾಡುತ್ತದೆ. ಅಲ್ಲದೆ ಜೀರ್ಣಕ್ರಿಯೆಗೂ ಬಾಳೆಹಣ್ಣು ಸಹಕಾರಿ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

11 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

11 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago