Featured

ಎಸಿಡಿಟಿ ನಿವಾರಣೆಗೆ ಈ ಮನೆಮದ್ದು ಸಹಕರಿಸುತ್ತದೆ ಉಪಯೋಗಿಸಿ – Vishwanews24

ಅನಿಯಮಿತ ಆಹಾರ ಸೇವನೆ, ಆಹಾರ ಸರಿಯಾಗಿ ಜೀರ್ಣವಾಗದಿರುವುದು, ಸಾಕಷ್ಟು ನೀರು ಸೇವಿಸದಿರುವುದು, ಮಸಾಲೆಯುಕ್ತ ಹಾಗೂ ಜಂಕ್ ಫುಡ್ ಸೇವನೆ, ಒತ್ತಡ, ಧೂಮಪಾನ, ತುಂಬಾ ಹೊತ್ತು ಆಹಾರ ಸೇವಿಸದೆ ಇರೋದು ಎಸಿಡಿಟಿಗೆ ಕಾರಣವಾಗುತ್ತದೆ.ಹೊಟ್ಟೆ ಉರಿ, ಎದೆಯುರಿ, ಹುಳಿ ತೇಗು, ಕಡಿಮೆ ಹಸಿವು, ಹೊಟ್ಟೆ ಉಬ್ಬರ ಇವೆಲ್ಲವೂ ಎಸಿಡಿಟಿಯ ಲಕ್ಷಣವಾಗಿದೆ.

ಹೊಟ್ಟೆ, ಜೀರ್ಣಕ್ರಿಯೆಗೆ ಸಂಬಂಧಿತ ಅನೇಕ ಸಮಸ್ಯೆಗೆ ಮಜ್ಜಿಗೆ ರಾಮಬಾಣ. ಎಸಿಡಿಟಿ ಆಗದಂತೆ ತಡೆಯಲು ಊಟದ ಬಳಿಕ ಮಜ್ಜಿಗೆ ಕುಡಿಯುವ ಪದ್ದತಿ ಈಗಲೂ ಇದೆ. ಎಸಿಡಿಟಿ ಆದಲ್ಲಿ, ತಂಪಾದ ಮಜ್ಜಿಗೆ ನಿಯಮಿತವಾಗಿ ಸೇವಿಸುವುದು ಒಳ್ಳೆಯದು.

ಶುಂಠಿ ರಸಕ್ಕೆ ನಿಂಬೆ ರಸ ಹಾಗೂ ಜೇನು ತುಪ್ಪ ಸೇರಿಸಿ ಕುಡಿಯಿರಿ. ಇದು ಹೊಟ್ಟೆಯುರಿ ಕಡಿಮೆ ಮಾಡಿ ಎಸಿಡಿಟಿ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.

ಅಶ್ವಗಂಧ

ಹೊಟ್ಟೆ ತುಂಬಿದ್ದರೂ ಹೊಟ್ಟೆಯುರಿ ಕಾಡುತ್ತಿದ್ದರೆ ಅಶ್ವಗಂಧವನ್ನು ಸೇವನೆ ಮಾಡಿ. ಇದ್ರಿಂದ ಸಾಕಷ್ಟು ಪ್ರಯೋಜನಗಳಿವೆ.ಹಿಂದಿನವರು ಕೂಡ ಎಸಿಡಿಟಿ ಸಮಸ್ಯೆಗೆ ಚಂದನವನ್ನು ಬಳಸುತ್ತಿದ್ದರು. ಇದು ಹೊಟ್ಟೆಯುರಿ, ಎದೆಯುರಿ, ವಾಕರಿಕೆ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ದೂರ ಮಾಡುತ್ತದೆ.

ತಂಪಾದ ಹಾಲು

ಎಸಿಡಿಟಿ ಈಗಾಗಲೇ ಆರಂಭವಾದರೆ, ತಂಪಾದ ಹಾಲು ತುಂಬಾ ಒಳ್ಳೆಯ ಔಷಧವಾಗಿ ಪರಿಣಮಿಸುತ್ತದೆ. ಹಾಲಿನಲ್ಲಿರುವ ಅಂಶ ಆ್ಯಸಿಡ್‌ ಅಂಶವನ್ನು ಹೀರಿಕೊಳ್ಳುವ ಗುಣಹೊಂದಿದೆ. ಸಕ್ಕರೆ ಅಥವಾ ಇನ್ನಿತರ ಯಾವುದೇ ವಸ್ತುಗಳನ್ನು ಬೆರೆಸದೆ, ತಂಪಾದ ಹಾಲನ್ನು ಕುಡಿಯಿರಿ.

ತುಳಸಿ 
ಜೀರ್ಣಕ್ರಿಯೆಯನ್ನು ಸರಿಪಡಿಸುವಲ್ಲಿ ತುಳಸಿಯನ್ನು ಔಷಧಿ ಎಂದೇ ಪರಿಗಣಿಸಲಾಗುತ್ತದೆ. ಅಷ್ಟು ಮಾತ್ರ ಅಲ್ಲ, ಆಯುರ್ವೇದದಲ್ಲಿ ತುಳಸಿ ರಸ ಔಷಧವೆಂದೇ ಪರಿಗಣಿಸಲಾಗಿದೆ. ತುಳಸಿ ಎಲೆಯನ್ನು ಹಾಗೆಯೇ ತಿನ್ನಬಹುದು, ಅಥವಾ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಿಯೂ ಸೇವಿಸಬಹುದು. ಇದನ್ನು ನಿಮ್ಮ ಊಟದ ಬಳಿಕ ಸೇವಿಸಿದರೆ ಇನ್ನೂ ಒಳ್ಳೆಯದು

ಜೀರಿಗೆ

ಇದಲ್ಲದೆ, ಜೀರಿಗೆಯೂ ಹೊಟ್ಟೆಯ ಸಮಸ್ಯೆಗಳನ್ನು ದೂರವಾಗಿಸಲು ಬಳಸುತ್ತಾರೆ. ಜೀರಿಗೆಯನ್ನು ನೇರ ಬಾಯಿಗೆ ಹಾಕಬಹುದು ಅಥವಾ ಅವನ್ನು ನೀರಿನಲ್ಲಿ ಕುದಿಸಿ, ಬಿಸಿ ನೀರನ್ನೂ ಕುಡಿಯುವುದರಿಂದ ಹೆಚ್ಚು ಅನುಕೂಲವಾಗುತ್ತದೆ.

ಬಾಳೆಹಣ್ಣು 
ಪೊಟ್ಯಾಷಿಯಂ ಅಂಶವನ್ನು ಹೊಂದಿರುವ ಬಾಳೆ ಹಣ್ಣುಗಳು ಹೊಟ್ಟೆಯಲ್ಲಿ ಆ್ಯಸಿಡ್‌ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಉತ್ತಮ ಕೆಲಸ ಮಾಡುತ್ತದೆ. ಅಲ್ಲದೆ ಜೀರ್ಣಕ್ರಿಯೆಗೂ ಬಾಳೆಹಣ್ಣು ಸಹಕಾರಿ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

10 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

10 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago