Featured

ಎಸೆಸೆಲ್ಸಿ ಪರೀಕ್ಷೆ  : ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆಪತ್ರಿಕೆ ಪ್ರಕಟ -Vishwanews24

ಎಸೆಸೆಲ್ಸಿ ಪರೀಕ್ಷೆ  : ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆಪತ್ರಿಕೆ ಪ್ರಕಟ -Vishwanews24

ಬೆಂಗಳೂರು : ಕೊರೊನಾ ಸಂಕಷ್ಟದ ನಡುವೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಜುಲೈ 2021ರ ಎಸೆಸೆಲ್ಸಿಪರೀಕ್ಷೆಗೆ ಸಂಬಂಧಿಸಿದ ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆಪತ್ರಿಕೆಗಳನ್ನು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.ಉದ್ಯೋಗ ನೇಮಕಾತಿಗೆ ನಡೆಸುವ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಪರೀಕ್ಷೆಯನ್ನು ಈ ಬಾರಿ ನಡೆಸಲಾಗುತ್ತಿದೆ.

ಜೂನ್ 2021ರಲ್ಲಿ ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಿ ಕೊವೀಡ್ ಕಾರಣದಿಂದ ಮತ್ತಷ್ಟು ಸರಳೀಕರಿಸಿ ಎರಡು ದಿನಗಳಿಗೆ ಪರೀಕ್ಷೆಯನ್ನು ಸೀಮಿತಗೊಳಿಸಿ, ಬಹು ಆಯ್ಕೆ ಪ್ರಶ್ನೆ ( Multiple Choice Question Based ) ಮಾದರಿಯಲ್ಲಿ ವಿಷಯವಾರು ಗರಿಷ್ಠ 40 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ.

ಅದರ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರಗಳನ್ನು ಶೇಡ್ ಮಾಡುವ ಓಎಂಆರ್ ಗಳ ಮಾದರಿಯನ್ನು ಮಂಡಳಿಯ http://sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ.

ಈ ಬಗ್ಗೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಸದರಿ ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಓಎಂಆರ್ ಗಳ ಮಾದರಿಯನ್ನು ಡೌನ್ ಲೋಡ್ ಮಾಡಿಕೊಂಡು, ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುವಾಗುವಂತೆ ಕ್ರಮವಹಿಸಲು ಸೂಚಿಸಿದೆ. ಉಳಿದಂತೆ ಭಾಷಾ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂಬುದಾಗಿ ತಿಳಿಸಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

9 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

9 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

10 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

10 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

10 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago