ಕಳೆದ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿಯೂ ಆ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕುಂಜಿಬೆಟ್ಟು ಟಿ.ಎ. ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಮೇಧಾ ಭಟ್ 624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಮತ್ತು ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಮನೋಜ್ ಮಲ್ಯ 623 ಅಂಕ ಪಡೆದು ರಾಜ್ಯದಲ್ಲಿ ತೃತೀಯ ಸ್ಥಾನಗಳೊಂದಿಗೆ ಉಡುಪಿ ಜಿಲ್ಲೆಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಜಿಲ್ಲೆಯನ್ನು ಕಳೆದ ಬಾರಿಯಂತೆ ಈ ಬಾರಿಯು ಪ್ರಥಮ ಸ್ಥಾನ ಕಾಯ್ದುಕೊಳ್ಳಲು ಹಲವು ಯೋಜನೆಗಳನ್ನು ರೂಪಿಸಲಾಗಿತ್ತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶೇಷಶಯನ ಕಾರಿಂಜ ತಿಳಿಸಿದ್ದಾರೆ.
ಪ್ರತಿ ತಿಂಗಳು ಮುಖ್ಯ ಶಿಕ್ಷಕರಿಗೆ ಶೈಕ್ಷಣಿಕ ಸಮಾಲೋಚನೆ ಸಭೆ ನಡೆಸುವುದು, ಪೂರ್ವಬಾವಿ ಪರೀಕ್ಷೆಗಳನ್ನು ಬರೆಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರಿಹಾರಾತ್ಮಕ ಕ್ರಮ ಕೈಗೊಳ್ಳಲಾಗುತ್ತಿತ್ತು. ನಾನು ಸೇರಿದಂತೆ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಶಾಲೆಗಳಿಗೆ ನಿರಂತರ ಭೇಟಿ ನೀಡಿ ಮೇಲ್ವಿಚಾರಣೆ ನಡೆಸುವುದು, ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸನಿವಾಸ ವಿಶೇಷ ವಸತಿ ಶಿಬಿರ, ಪರೀಕ್ಷೆ ಬಗ್ಗೆ ಪೂರ್ವ ತಯಾರಿ ಕಳೆದ ಆರು ತಿಂಗಳಿನಿಂದಲೇ ಮಾಡಿಕೊಂಡಿದ್ದವು. ಮಕ್ಕಳನ್ನು ಪರೀಕ್ಷೆಗೆ ತಯಾರಿ ಮಾಡುವ ಬಗ್ಗೆ ವಿಷಯವಾರು ಶಿಕ್ಷಕರಿಗೆ ವ್ಯವಸ್ಥಿತ ತರಬೇತಿ ನೀಡಲಾಗಿತ್ತು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಕಲಿಕೆಗಾಗಿ ಹೆಚ್ಚಿನ ಮುತುವರ್ಜಿ ವಹಿಸಲಾಗಿತ್ತು ಎಂದು ಮಾಹಿತಿ ನೀಡಿದರು.ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಕಾಯ್ದುಕೊಳ್ಳುವಲ್ಲಿ ಇಲಾಖೆ ಸಾಕಷ್ಟು ಮುತುವರ್ಜಿ ವಹಿಸಿದೆ. ಶಿಕ್ಷಕರೂ ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದು ಫಲಿತಾಂಶದಲ್ಲಿ ಪ್ರತಿಫಲನಗೊಂಡಿದೆ. ಉತ್ತಮ ಫಲಿತಾಂಶ ಬಂದಿರುವುದು ಸಂತಸ ತಂದಿದೆ.
ಶೇಕಡಾವಾರು ಏರಿಕೆ: ಕಳೆದ ವರ್ಷ ಶೇ.84.24 ಫಲಿತಾಂಶ ಪಡೆದಿದ್ದ ಜಿಲ್ಲೆ ಈ ಬಾರಿ ಶೇ.3.94 ಏರಿಕೆಯೊಂದಿಗೆ ಶೇ.88.18 ತಲುಪಿ ವಿಶೇಷ ಸಾಧನೆ ಮಾಡಿದೆ. 6,495 ಗಂಡುಮಕ್ಕಳು, 6490 ಹೆಣ್ಮಕ್ಕಳ ಸಹಿತ ಒಟ್ಟು 12,985 ಮಂದಿ ಪರೀಕ್ಷೆ ಬರೆದಿದ್ದರು. ಇವರಲ್ಲಿ 5537 ಗಂಡುಮಕ್ಕಳು, 5,913 ಹೆಣ್ಣುಮಕ್ಕಳ ಸಹಿತ ಒಟ್ಟು 11,450 ಮಂದಿ ಉತ್ತೀರ್ಣರಾಗಿದ್ದಾರೆ.
ಜಿಲ್ಲೆಯಲ್ಲಿ ಎಂದಿನಂತೆ ಈ ಬಾರಿಯೂ ಹೆಣ್ಮಕ್ಕಳೇ ಮುಂದು. ನಗರ ಭಾಗದ 2,806 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2,586 ಮಂದಿ ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಭಾಗದ 10,379 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 9,056 ಮಂದಿ ತೇರ್ಗಡೆಯಾಗಿದ್ದಾರೆ. ಕನ್ನಡ ಮಾಧ್ಯಮದ 7098 ವಿದ್ಯಾರ್ಥಿಗಳಲ್ಲಿ, 5810 ವಿದ್ಯಾರ್ಥಿಗಳು ಉತ್ತೀರ್ಣರಾದರೆ, ಆಂಗ್ಲಮಾಧ್ಯಮದ 6,087 ವಿದ್ಯಾರ್ಥಿಗಳಲ್ಲಿ 5,832 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅಂಗವಿಕಲರು, ಬುದ್ಧಿಮಾಂದ್ಯರು ಸೇರಿದಂತೆ ಒಟ್ಟು 27 ಮಂದಿ ಪರೀಕ್ಷೆ ಬರೆದಿದ್ದು, 19 ಮಂದಿ ಉತ್ತೀರ್ಣರಾಗಿದ್ದಾರೆ.
ಒಟ್ಟು ವಿದ್ಯಾರ್ಥಿಗಳಲ್ಲಿ ಎ ಪ್ಲಸ್ (ಶೇ.90-100) 1086, ಎ (ಶೇ.80-90) 2716, ಬಿ ಪ್ಲಸ್ (ಶೇ.70-80) 3282, ಬಿ (ಶೇ.60-70) 2844, ಸಿ ಪ್ಲಸ್ (ಶೇ.50-60) 1529, ಸಿ (ಶೇ.35-50) 185 ಮಂದಿ ಉತ್ತೀರ್ಣರಾಗಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…