ಬೆಂಗಳೂರು,: ಎಸ್ ಎಸ್ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಉಮಾ ಶಂಕರ್ ಏ. 30 ರ ಮಂಗಳವಾರ ಪ್ರಕಟಿಸಿದರು.
ಈ ಬಾರಿ 73.7ರಷ್ಟು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಗಿಂತ ಫಲಿತಾಂಶದಲ್ಲಿ ಶೇ .1.77ರಷ್ಟು ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು. ಇಬ್ಬರು ವಿದ್ಯಾರ್ಥಿನಿಯರು 625ರಲ್ಲಿ 625 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಮಾ.21ರಿಂದ ಎ.4ರ ವರೆಗೆ ನಡೆದ ಎಸೆಸೆಲ್ಸಿ ಪರೀಕ್ಷೆಗೆ 8.41 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಎಲ್ಲ ಪರೀಕ್ಷೆಗಳಲ್ಲೂ ಸರಾಸರಿ 25 ಸಾವಿರ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಫಲಿತಾಂಶದಲ್ಲಿ ಹಾಸನ ಪ್ರಥಮ, ರಾಮನಗರ ದ್ವಿತೀಯ, ಬೆಂಗಳೂರು ಗ್ರಾಮಾಂತರ ತೃತೀಯಾ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಉಡುಪಿ 5 ನೇ ಸ್ಥಾನ, ಚಿಕ್ಕೋಡಿ 6 ನೇ ಸ್ಥಾನ ಪಡೆದಿದೆ. ಪಡೆದುಕೊಂಡಿದೆ. ಇನ್ನು ಫಲಿತಾಂಶದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಶೇ. 76.67 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕುಮುಟದ ನಾಗಾಂಜಲಿ ಮತ್ತು ಅನೇಕಲ್ ನ ಸೃಜನಾ.ಡಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…