ಬೆಂಗಳೂರು: ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ದೊಡ್ಡ ಬದಲಾವಣೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, 2025-26ನೇ ಸಾಲಿನಿಂದಲೇ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಕೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ನಿರ್ಧಾರವು ವಿದ್ಯಾರ್ಥಿಗಳ ಉತ್ತೀರ್ಣತಾ ಪ್ರಮಾಣ ಹೆಚ್ಚಿಸುವ ಮತ್ತು ಸಿಬಿಎಸ್ಇ ಹಾಗೂ ನೆರೆ ರಾಜ್ಯಗಳ ಏಕರೂಪ ಪದ್ಧತಿಯನ್ನು ರಾಜ್ಯದಲ್ಲಿ ಅಳವಡಿಸುವ ದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ.
ಎಸ್ಎಸ್ಎಲ್ಸಿ (SSLC): ಪ್ರಸ್ತುತ 625 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (219 ಅಂಕಗಳು) ಗಳಿಸುವುದು ಕಡ್ಡಾಯವಿತ್ತು. ಹೊಸ ನಿಯಮದ ಪ್ರಕಾರ, 625 ಅಂಕಗಳಿಗೆ ಕನಿಷ್ಟ 206 ಅಂಕ (ಶೇ. 33) ಗಳಿಸಿದರೆ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಪ್ರತಿ ವಿಷಯದಲ್ಲಿ ಕಡ್ಡಾಯವಾಗಿ ಕನಿಷ್ಠ 30 ಅಂಕ ಪಡೆಯಲೇಬೇಕು.
ದ್ವಿತೀಯ ಪಿಯುಸಿ (II PUC): 600 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (210 ಅಂಕಗಳು) ಪಡೆಯಬೇಕಿತ್ತು. ಹೊಸ ನಿಯಮದಂತೆ, 600 ಅಂಕಗಳಿಗೆ ಕನಿಷ್ಟ 198 ಅಂಕ (ಶೇ. 33) ಪಡೆದರೆ ಪಾಸ್ ಆಗುತ್ತಾರೆ. ಪ್ರತಿ ವಿಷಯದಲ್ಲಿ ಲಿಖಿತ ಮತ್ತು ಆಂತರಿಕ ಅಂಕ ಸೇರಿ 30 ಅಂಕ ಬರುವುದು ಕಡ್ಡಾಯ.
2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]