ಬೆಂಗಳೂರು: ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ದೊಡ್ಡ ಬದಲಾವಣೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, 2025-26ನೇ ಸಾಲಿನಿಂದಲೇ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಕೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ನಿರ್ಧಾರವು ವಿದ್ಯಾರ್ಥಿಗಳ ಉತ್ತೀರ್ಣತಾ ಪ್ರಮಾಣ ಹೆಚ್ಚಿಸುವ ಮತ್ತು ಸಿಬಿಎಸ್ಇ ಹಾಗೂ ನೆರೆ ರಾಜ್ಯಗಳ ಏಕರೂಪ ಪದ್ಧತಿಯನ್ನು ರಾಜ್ಯದಲ್ಲಿ ಅಳವಡಿಸುವ ದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ.
ಎಸ್ಎಸ್ಎಲ್ಸಿ (SSLC): ಪ್ರಸ್ತುತ 625 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (219 ಅಂಕಗಳು) ಗಳಿಸುವುದು ಕಡ್ಡಾಯವಿತ್ತು. ಹೊಸ ನಿಯಮದ ಪ್ರಕಾರ, 625 ಅಂಕಗಳಿಗೆ ಕನಿಷ್ಟ 206 ಅಂಕ (ಶೇ. 33) ಗಳಿಸಿದರೆ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಪ್ರತಿ ವಿಷಯದಲ್ಲಿ ಕಡ್ಡಾಯವಾಗಿ ಕನಿಷ್ಠ 30 ಅಂಕ ಪಡೆಯಲೇಬೇಕು.
ದ್ವಿತೀಯ ಪಿಯುಸಿ (II PUC): 600 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (210 ಅಂಕಗಳು) ಪಡೆಯಬೇಕಿತ್ತು. ಹೊಸ ನಿಯಮದಂತೆ, 600 ಅಂಕಗಳಿಗೆ ಕನಿಷ್ಟ 198 ಅಂಕ (ಶೇ. 33) ಪಡೆದರೆ ಪಾಸ್ ಆಗುತ್ತಾರೆ. ಪ್ರತಿ ವಿಷಯದಲ್ಲಿ ಲಿಖಿತ ಮತ್ತು ಆಂತರಿಕ ಅಂಕ ಸೇರಿ 30 ಅಂಕ ಬರುವುದು ಕಡ್ಡಾಯ.
2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…