ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್ಪ್ರೆಸ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು.
ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ ಭಾಗಿಯಾಗಿದ್ದರು.
ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಎಸ್ಟಿ, ಎಸ್ಸಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸಲು ಇಷ್ಟು ದಿನ ಏನು ಮಾಡುತ್ತಿದ್ದರು? ಮೀಸಲಾತಿ ಹೆಚ್ಚಳಕ್ಕೆ ಆದೇಶ ಯಾವಾಗ ಆಯಿತು? ಆದೇಶ ಆಗಿ ಬಹಳ ದಿನ ಆಯ್ತು, ನಂತರದಲ್ಲಿ ಕ್ಯಾಬಿನೆಟ್ನಲ್ಲೂ ನಿರ್ಧಾರ ಆಯಿತು ಎಂದರು.
ನಾವು ಪ್ರತಿಭಟನೆಗೆ ಕರೆ ಕೊಟ್ಟ ಬಳಿಕ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಶೇ.50ರಷ್ಟು ಇರುವ ಮೀಸಲಾತಿ ಏರಿಕೆ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸರ್ಕಾರ ಉತ್ತರ ಕೊಟ್ಟಿದೆ. ಅಂದರೆ ಏನು ಅರ್ಥ? ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳ ಮಾಡಿದರೂ ಕೇಂದ್ರ ಒಪ್ಪಲ್ಲ ಎಂದಲ್ಲವೇ ಎಂದು ಪ್ರಶ್ನಿಸಿದರು.
ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇ.50 ಮೀರಬಾರದು ಎಂದಿದೆ. ಅದು ಮೀರಬೇಕಾದರೆ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು. ಕೇವಲ ಮತಕ್ಕಾಗಿ ಹಾಗೂ ಜನರ ದಾರಿತಪ್ಪಿಸಲು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ದಲಿತರಿಗೆ ಎಷ್ಟು ಮೋಸ ಮಾಡುತ್ತಿದ್ದೀರಿ? ಬಿಜೆಪಿ ಸರ್ಕಾರ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಸರ್ಕಾರ 15 ದಿನ ಮಾತ್ರ ಇದೆ. ಅಷ್ಟು ದಿನ ಕೂಡಾ ಇರಬಾರದು. ಕೂಡಲೇ ವಜಾ ಮಾಡಬೇಕು ಎಂದು ಒತ್ತಾಯಿಸಿ, ರಾಜ ಭವನ ಚಲೋ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸರ್ಕಾರ ದಲಿತರಿಗೆ ಅವಮಾನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…