Featured

ಎಸ್‌ಸಿ, ಎಸ್‌ಟಿ ಮೀಸಲಾತಿ : ಕಾಂಗ್ರೆಸ್‌ನಿಂದ ರಾಜಭವನ ಚಲೋಗೆ ಯತ್ನ; ಡಿಕೆಶಿ, ಸಿದ್ದರಾಮಯ್ಯ ಸೇರಿ ಅನೇಕ ನಾಯಕರು ಪೊಲೀಸರ ವಶಕ್ಕೆ – Vishwanews24

ಎಸ್‌ಸಿ, ಎಸ್‌ಟಿ ಮೀಸಲಾತಿ ಗೊಂದಲ ಕಾಂಗ್ರೆಸ್‌ನಿಂದ ರಾಜಭವನ ಚಲೋಗೆ ಯತ್ನ..

ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ಸೇರಿ ಅನೇಕ ನಾಯಕರು ಪೊಲೀಸರ ವಶಕ್ಕೆ..

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್‌ಪ್ರೆಸ್‌ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು.

ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಪರಿಷತ್ ವಿಪಕ್ಷ ನಾಯಕ ಬಿಕೆ‌ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ ಭಾಗಿಯಾಗಿದ್ದರು.

ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಎಸ್‌ಟಿ, ಎಸ್‌ಸಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸಲು ಇಷ್ಟು ದಿನ ಏನು ಮಾಡುತ್ತಿದ್ದರು? ಮೀಸಲಾತಿ ಹೆಚ್ಚಳಕ್ಕೆ ಆದೇಶ ಯಾವಾಗ ಆಯಿತು? ಆದೇಶ ಆಗಿ ಬಹಳ ದಿನ ಆಯ್ತು, ನಂತರದಲ್ಲಿ ಕ್ಯಾಬಿನೆಟ್‌ನಲ್ಲೂ ನಿರ್ಧಾರ ಆಯಿತು ಎಂದರು.

ನಾವು ಪ್ರತಿಭಟನೆಗೆ ಕರೆ ಕೊಟ್ಟ ಬಳಿಕ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಶೇ.50ರಷ್ಟು ಇರುವ ಮೀಸಲಾತಿ ಏರಿಕೆ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸರ್ಕಾರ ಉತ್ತರ ಕೊಟ್ಟಿದೆ. ಅಂದರೆ ಏನು ಅರ್ಥ? ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳ ಮಾಡಿದರೂ ಕೇಂದ್ರ ಒಪ್ಪಲ್ಲ ಎಂದಲ್ಲವೇ ಎಂದು ಪ್ರಶ್ನಿಸಿದರು.

ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇ.50 ಮೀರಬಾರದು ಎಂದಿದೆ. ಅದು ಮೀರಬೇಕಾದರೆ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು. ಕೇವಲ ಮತಕ್ಕಾಗಿ ಹಾಗೂ ಜನರ ದಾರಿತಪ್ಪಿಸಲು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ದಲಿತರಿಗೆ ಎಷ್ಟು ಮೋಸ ಮಾಡುತ್ತಿದ್ದೀರಿ? ಬಿಜೆಪಿ ಸರ್ಕಾರ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಸರ್ಕಾರ 15 ದಿನ ಮಾತ್ರ ಇದೆ. ಅಷ್ಟು ದಿನ ಕೂಡಾ ಇರಬಾರದು. ಕೂಡಲೇ ವಜಾ ಮಾಡಬೇಕು ಎಂದು ಒತ್ತಾಯಿಸಿ, ರಾಜ ಭವನ ಚಲೋ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸರ್ಕಾರ ದಲಿತರಿಗೆ ಅವಮಾನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

1 hour ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

2 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

2 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

2 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

2 hours ago

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago