ಮಂಗಳೂರು, : ತುಳುವನ್ನು ತೃತೀಯ ಭಾಷೆಯಾಗಿ ಕಲಿತು ಎಸೆಸ್ಸೆಲ್ಸಿ ಪರೀಕ್ಷೆ ಬರೆದ 617 ವಿದ್ಯಾರ್ಥಿಗಳಲ್ಲಿ ಎಲ್ಲರೂ ಪಾಸಾಗಿದ್ದು ಶೇ.100 ಫಲಿತಾಂಶ ದಾಖಲಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 41 ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಗಳಲ್ಲಿ ತುಳು ಭಾಷೆಯ ಪಠ್ಯ ಕಲಿಸಲಾಗುತ್ತಿದ್ದು ಈ ಪೈಕಿ 34 ಶಾಲೆಗಳ 617 ವಿದ್ಯಾರ್ಥಿಗಳು 10ನೇ ತರಗತಿಯ ಪರೀಕ್ಷೆಗೆ ಹಾಜರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 585 ವಿದ್ಯಾರ್ಥಿಗಳು ಮತ್ತು ಉಡುಪಿ ಜಿಲ್ಲೆಯ 32 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳೂ ಪಾಸಾಗಿದ್ದು 63 ವಿದ್ಯಾರ್ಥಿಗಳು ತುಳು ಭಾಷೆಯಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.
ತುಳುವಿನಲ್ಲಿ ಉತ್ತಮ ಸಾಧನೆ ದಾಖಲಿಸುವ ಮೂಲಕ ಶಾಲೆಗಳ ಫಲಿತಾಂಶ ಹಾಗೂ ಜಿಲ್ಲೆಯ ಒಟ್ಟು ಫಲಿತಾಂಶದಲ್ಲಿ ಏರಿಕೆಯಾಗಿರುವುದು ಕಂಡು ಬರುತ್ತದೆ. ಮುಂದಿನ ವರ್ಷಗಳಲ್ಲಿ ತುಳು ಪಠ್ಯ ಭೋದನೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ತೃತೀಯ ಐಚ್ಛಿಕ ಭಾಷೆಯಾಗಿ ತುಳುವನ್ನು ಆಯ್ಕೆ ಮಾಡುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತಿದೆ ಎಂದು ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎ.ಸಿ ಭಂಡಾರಿ ತಿಳಿಸಿದ್ದಾರೆ.
ಇದಕ್ಕೆ ಕಾರಣರಾದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಗಳ ಮುಖ್ಯ ಶಿಕ್ಷಕರು, ತುಳು ಭಾಷಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನಾರ್ಹರು. ಎಂದು ಹೇಳಿರುವ ಅಧ್ಯಕ್ಷರು ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಶಾಲೆಗಳ ಶಿಕ್ಷಕ ವರ್ಗ ಹಾಗೂ ಆಡಳಿತ ಮಂಡಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಮಾತನಾಡಿದ ತುಳು ಅಕಾಡಮಿ ಅಧ್ಯಕ್ಷ ಎಸಿ ಭಂಡಾರಿ “ಮುಂದಿನ ವರ್ಷಗಳಲ್ಲಿ ತುಳು ಪಠ್ಯ ಬೋಧನೆಗೆ ಇನ್ನಷ್ಟು ಉತ್ತೇಜನ ದೊರಕಿಸಿಕೊಡಲಾಗುತ್ತದೆ. ವಿದ್ಯಾರ್ಥಿಗಳು ತೃತೀಯ ಐಚ್ಚಿಕ ವಿಷಯವಾಗಿ ತುಳುವನ್ನು ಆಯ್ಕೆ ಮಾಡಿಕೊಳ್ಳುವ ಕಾರಣ ಹೆಚ್ಚಿನ ಅಂಕ ಪಡೆಯುತ್ತಿದ್ದಾರೆ” ಎಂದರು
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…