Featured

ಎಸ್ಸೆಸ್ಸೆಲ್ಸಿಯಲ್ಲಿ ತುಳು ಭಾಷೆಯಲ್ಲಿ ಶೇ. 100 ಫಲಿತಾಶ -Vishwanews24

ಮಂಗಳೂರು, : ತುಳುವನ್ನು ತೃತೀಯ ಭಾಷೆಯಾಗಿ ಕಲಿತು ಎಸೆಸ್ಸೆಲ್ಸಿ ಪರೀಕ್ಷೆ ಬರೆದ 617 ವಿದ್ಯಾರ್ಥಿಗಳಲ್ಲಿ ಎಲ್ಲರೂ ಪಾಸಾಗಿದ್ದು ಶೇ.100 ಫಲಿತಾಂಶ ದಾಖಲಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 41 ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಗಳಲ್ಲಿ ತುಳು ಭಾಷೆಯ ಪಠ್ಯ ಕಲಿಸಲಾಗುತ್ತಿದ್ದು ಈ ಪೈಕಿ 34 ಶಾಲೆಗಳ 617 ವಿದ್ಯಾರ್ಥಿಗಳು 10ನೇ ತರಗತಿಯ ಪರೀಕ್ಷೆಗೆ ಹಾಜರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 585 ವಿದ್ಯಾರ್ಥಿಗಳು ಮತ್ತು ಉಡುಪಿ ಜಿಲ್ಲೆಯ 32 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳೂ ಪಾಸಾಗಿದ್ದು 63 ವಿದ್ಯಾರ್ಥಿಗಳು ತುಳು ಭಾಷೆಯಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.

ತುಳುವಿನಲ್ಲಿ ಉತ್ತಮ ಸಾಧನೆ ದಾಖಲಿಸುವ ಮೂಲಕ ಶಾಲೆಗಳ ಫಲಿತಾಂಶ ಹಾಗೂ ಜಿಲ್ಲೆಯ ಒಟ್ಟು ಫಲಿತಾಂಶದಲ್ಲಿ ಏರಿಕೆಯಾಗಿರುವುದು ಕಂಡು ಬರುತ್ತದೆ. ಮುಂದಿನ ವರ್ಷಗಳಲ್ಲಿ ತುಳು ಪಠ್ಯ ಭೋದನೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ತೃತೀಯ ಐಚ್ಛಿಕ ಭಾಷೆಯಾಗಿ ತುಳುವನ್ನು ಆಯ್ಕೆ ಮಾಡುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತಿದೆ ಎಂದು ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎ.ಸಿ ಭಂಡಾರಿ ತಿಳಿಸಿದ್ದಾರೆ.

ಇದಕ್ಕೆ ಕಾರಣರಾದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಗಳ ಮುಖ್ಯ ಶಿಕ್ಷಕರು, ತುಳು ಭಾಷಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನಾರ್ಹರು. ಎಂದು ಹೇಳಿರುವ ಅಧ್ಯಕ್ಷರು ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಶಾಲೆಗಳ ಶಿಕ್ಷಕ ವರ್ಗ ಹಾಗೂ ಆಡಳಿತ ಮಂಡಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿದ ತುಳು ಅಕಾಡಮಿ ಅಧ್ಯಕ್ಷ ಎಸಿ ಭಂಡಾರಿ “ಮುಂದಿನ ವರ್ಷಗಳಲ್ಲಿ ತುಳು ಪಠ್ಯ ಬೋಧನೆಗೆ ಇನ್ನಷ್ಟು ಉತ್ತೇಜನ ದೊರಕಿಸಿಕೊಡಲಾಗುತ್ತದೆ. ವಿದ್ಯಾರ್ಥಿಗಳು ತೃತೀಯ ಐಚ್ಚಿಕ ವಿಷಯವಾಗಿ ತುಳುವನ್ನು ಆಯ್ಕೆ ಮಾಡಿಕೊಳ್ಳುವ ಕಾರಣ ಹೆಚ್ಚಿನ ಅಂಕ ಪಡೆಯುತ್ತಿದ್ದಾರೆ” ಎಂದರು

Vishwa News 24

Recent Posts

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು – vishwanews24

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…

5 minutes ago

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ – vishwanews24

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ…

17 minutes ago

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

18 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

18 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

18 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

18 hours ago