Featured

ಎಸ್ಸೆಸ್ಸೆಲ್ಸಿ :  ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದ ತೀರ್ಪು: ಸುರೇಶ್ ಕುಮಾರ್ – Vishwanews24

ಎಸ್ಸೆಸ್ಸೆಲ್ಸಿ :  ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದ ತೀರ್ಪು: ಸುರೇಶ್ ಕುಮಾರ್ – Vishwanews24

ಬೆಂಗಳೂರು: ‘ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಹೈಕೋರ್ಟ್‌ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆ ರೂಪಿಸಿದ ಎಸ್‌ಒಪಿ ಪಾಲನೆಗಳಂಥ ಉಪಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಪುರಸ್ಕರಿಸಿ, ಇದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಉಪಕ್ರಮವಾಗಿದೆ ಎಂದಿರುವ ಹೈಕೋರ್ಟ್ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದನ್ನು ತುಂಬು ಮನಸ್ಸಿನಿಂದ ಶ್ಲಾಘಿಸಿದೆ ಎಂದು ಅವರು ತಿಳಿಸಿದ್ದಾರೆ.

‘ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ ಸಕಾಲಿಕ ನಿರ್ಧಾರವನ್ನು ಕೈಗೊಂಡಿದೆ. ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ. ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿಸಿದೆ’ ಎಂದೂ ಹೇಳಿದ್ದಾರೆ.

‘ಕಳೆದ ವರ್ಷ ಕೂಡಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧದಲ್ಲಿ ಇದೇ ರೀತಿಯಲ್ಲಿ ಹೈಕೋರ್ಟ್ ತೀರ್ಪು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯದ ಕ್ರಮವನ್ನು ಪುರಸ್ಕರಿಸಿತ್ತು’ ಎಂದೂ ಅವರು ನೆನಪಿಸಿಕೊಂಡಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago