ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 616 ಅಂಕಗಳನ್ನು ಗಳಿಸಿದ ಇಂದಿರಾನಗರದ ಜೀವನಭೀಮಾನಗರದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿ ಮಹೇಶ ಅವರ ಮನೆಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿದ್ದಾರೆ.
ಈ ಕುರಿತು ಫೇಸ್ಬುಕ್ನಲ್ಲಿ ಬರಹ ಪ್ರಕಟಿಸಿರುವ ಸಚಿವರು, ‘ಮಹೇಶ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿರುವ ಕುಟುಂಬಕ್ಕೆ ಸೇರಿದ ಬಾಲಕನಾಗಿದ್ದು, ಬಡತನದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾನೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸವನ್ನು ಇದುವರೆಗೆ ಮುಗಿಸಿದ್ದಾನೆ. ಇಂದು ಅವನ ಮನೆಯೆಂದು ಕರೆಯಬಹುದಾದ ಪುಟ್ಟ ಗುಡಿಸಲಿಗೆ ಹೋಗಿದ್ದೆ. ಆ ಮನೆಯಲ್ಲಿ ಕುಳಿತುಕೊಳ್ಳಲೂ ಜಾಗವಿಲ್ಲ. ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿ ಬಂದಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.
‘ಮಹೇಶನಿಗೆ ಪಿಯುಸಿ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ತೆಗೆದುಕೊಂಡು ಓದಬೇಕೆಂಬ ಮಹದಾಸೆಯಿದೆ. ಅವನ ಮನೆ, ಅವನ ಕುಟುಂಬ, ಅವರ ತಾಯಿಯ ಮುಗ್ಧತೆ, ಮಹೇಶನ ಸಾಧನೆ ಎಲ್ಲ ಕಂಡಾಗ ಕಣ್ತುಂಬಿ ಬಂತು – ಅದೇ ರೀತಿ ಹೃದಯ ತುಂಬಿ ಬಂತು’ ಎಂದೂ ಸಚಿವರು ಉಲ್ಲೇಖಿಸಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…