Featured

ಎಸ್​​​​ಡಿಪಿಐ ಕಾರ್ಯಕರ್ತ ಅಶ್ರಫ್ ಹತ್ಯೆ ಆರೋಪಿ ಭರತ್​ಗೆ ಫೇಸ್ ಬುಕ್ ನಲ್ಲಿ ಜೀವ ಬೆದರಿಕೆ

ಮಂಗಳೂರು : ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ವರ್ಷದ ಹಿಂದೆ ಹತ್ಯೆಗೀಡಾಗಿದ್ದ ಎಸ್ ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಹತ್ಯೆ ಆರೋಪಿ ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗೆ ಫೇಸ್ ಬುಕ್ ನಲ್ಲಿ ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ  ಜೀವ ಬೆದರಿಕೆ ಹಾಕಲಾಗಿದೆ. ಹತ್ಯೆ ಆರೋಪಿ ಜಾಮೀನು ಪಡೆದ ಬೆನ್ನಲ್ಲೇ ಇದೀಗ ಸಾಮಾಜಿಕ ತಾಣಗಳಲ್ಲಿ ಪ್ರತೀಕಾರದ ಬೆದರಿಕೆ ಹಾಕಲಾಗಿದೆ.ಎಸ್.ಡಿ.ಪಿ.ಐ ಮುಖಂಡನಾಗಿದ್ದ ಅಶ್ರಫ್ ಕಲಾಯಿಯನ್ನು ಬಂಟ್ವಾಳ ತಾಲೂಕಿನ ಬೆಂಜನಪದವು ಎಂಬಲ್ಲಿ 2017 ಜೂ.21 ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬಜರಂಗದಳದ ಪುತ್ತೂರು ಸಹಸಂಚಾಲಕ ಭರತ್ ಕುಮ್ಡೇಲ್ ಪ್ರಮುಖ ಆರೋಪಿಯಾಗಿದ್ದ. ಘಟನೆಗೆ ಸಂಬಂಧಿಸಿ ಭರತ್ ಸೇರಿ ಹಲವರ ಬಂಧನವಾಗಿತ್ತು. ಆದ್ರೆ 16 ತಿಂಗಳು ಕಳೆದರೂ ಪ್ರಮುಖ ಆರೋಪಿ ಭರತ್ ಗೆ ಜಾಮೀನು ಲಭಿಸಿರಲಿಲ್ಲ. ಇದೀಗ ಹೈಕೋರ್ಟ್ ಆರೋಪಿಗೆ ಜಾಮೀನು ನೀಡಿದೆ.

ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ “ಅನ್ಯಾಯವಾಗಿ ಕೊಂದ ನಮ್ಮ ಸಹೋದರನ ಸಾವಿಗೆ ಅನ್ಯಾಯವಾಗಲು ಬಿಡಲಾರೆವು‌. ನಿನ್ನ ಕೌಂಟ್ ಡೌನ್ ಶುರುವಾಯಿತು. ಸದ್ಯದಲ್ಲೇ ನಿನಗೆ ಚಟ್ಟ ಕಟ್ಟಲಿದ್ದಾರೆ ನೆನಪಿರಲಿ” ಎಂದು ಬಹಿರಂಗ ‌ಕೊಲೆ ಬೆದರಿಕೆ ಹಾಕಲಾಗಿದೆ.

ಜಾಹೀರಾತುಗಳು

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

4 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

8 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

8 hours ago