ಮಡಿಕೇರಿ: ‘ಎಸ್ಡಿಪಿಐನಲ್ಲಿ ಗುರುತಿಸಿಕೊಂಡಿರುವ ಮುಸ್ಲಿಮರು ಪುಂಡ ಮುಸ್ಲಿಮರು’ ಎಂದು ಸಂಸದ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದರು.
‘ನಿಜವಾದ ಮುಸ್ಲಿಮರಿಗೂ, ಎಸ್ಡಿಪಿಐನಲ್ಲಿ ಇರುವ ಮುಸ್ಲಿಮರಿಗೂ ಸಾಕಷ್ಟು ವ್ಯತ್ಯಾಸವಿದೆ. ನಿಜವಾದ ಮುಸ್ಲಿಮರು, ಈ ದೇಶದ ಬಗ್ಗೆ ಕಾಳಜಿ ಇಟ್ಟುಕೊಂಡು ಜನರನ್ನು ಪ್ರೀತಿಸುತ್ತಿದ್ದಾರೆ. ಆದರೆ, ಎಸ್ಡಿಪಿಐನಲ್ಲಿ ಇರುವ ಮುಸ್ಲಿಮರು ಸಮಾಜಘಾತುಕ ಶಕ್ತಿಗಳು’ ಎಂದು ಭಾಗಮಂಡಲದಲ್ಲಿ ಶನಿವಾರ ಹೇಳಿದರು.
‘ಮೊದಲು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದ ಎಸ್ಡಿಪಿಐ ಕಾರ್ಯಕರ್ತರು, ಈಗ ಕಾಂಗ್ರೆಸ್ ಮುಖಂಡರ ಮೇಲೆಯೇ ದಾಳಿ ನಡೆಸಲು ಶುರು ಮಾಡಿದ್ದಾರೆ. ರಾಜಕೀಯ ಪಕ್ಷವಾಗಿ ಕೆಲಸ ಮಾಡುತ್ತಿರುವ ಎಸ್ಡಿಪಿಐ ಅನ್ನು ನಿಷೇಧ ಮಾಡುವುದಕ್ಕೆ ಕೆಲವು ಮಾನದಂಡಗಳಿವೆ. ಆ ಪ್ರಕಾರವೇ ಎಸ್ಡಿಪಿಐ ಅನ್ನು ನಿಷೇಧ ಮಾಡುತ್ತೇವೆ’ ಎಂದರು.
‘ಈ ಹಿಂದೆ ನಡೆದಿದ್ದ ಕೆಲವು ಹತ್ಯೆ, ದಾಳಿಯಲ್ಲೂ ಎಸ್ಡಿಪಿಐ, ಪಿಐಎಫ್ ಪಾತ್ರವಿರುವುದು ಸಾಬೀತಾಗಿದೆ. ಕೇಂದ್ರಕ್ಕೆ ರಾಜ್ಯದಿಂದ ಸಮರ್ಥವಾದ ವರದಿ ಹೋಗಲಿದೆ. ಬಳಿಕ ಕೇಂದ್ರವು ಕ್ರಮ ಕೈಗೊಳ್ಳಲಿದೆ’ ಎಂದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…