ರಾಮನಗರ : ತಾಕತ್ತಿದ್ದರೆ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆ ನಿಷೇಧಿಸಿ ಎಂದು ಬಿಜೆಪಿಗೆ ಶಾಸಕ ರಾಮಲಿಂಗಾ ರೆಡ್ಡಿ ಸವಾಲೆಸೆದಿದ್ದು ಎಸ್ಡಿಪಿಐನ ಪೋಷಕರೇ ಬಿಜೆಪಿಯವರು ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ”ಬಿಜೆಪಿಯು ಕಾಂಗ್ರೆಸ್ನ ಮತ ವಿಭಜನೆ ಮಾಡುವ ಷಡ್ಯಂತ್ರ ರೂಪಿಸಿದೆ. ಗಲಭೆಗಳು ಆದ ಸಂದರ್ಭದಲ್ಲಿ ಮಾತ್ರ ಎಸ್ಡಿಪಿಐ ನಿಷೇಧ ಮಾಡುವ ಬಗ್ಗೆ ಹೇಳುತ್ತಾರೆ. ನಿಜವಾಗಿ ಎಸ್ಡಿಪಿಐನ ಪೋಷಕರೇ ಬಿಜೆಪಿಯವರು. ಬರೀ ಹೇಳಿಕೆಗೆ ಮಾತ್ರ ಎಸ್ಡಿಪಿಐ ಹಾಗೂ ಪಿಎಫ್ಐ ನಿಷೇಧ ಸೀಮಿತವಾಗಿದೆ” ಎಂದು ಆರೋಪಿಸಿದ್ದಾರೆ.
”ಬಿಜೆಪಿ ಸರ್ಕಾರದಿಂದಾಗಿ ಕಾನೂನು ಸುವ್ಯವಸ್ಥೆ ದುಸ್ಥಿತಿಯಲ್ಲಿದ್ದು ಶಾಸಕರಿಗೂ ರಕ್ಷಣೆ ಇಲ್ಲದ ಸ್ಥಿತಿ ಉಂಟಾಗಿದೆ. ಕಳೆದ ಐದು ದಿನದಿಂದ . ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪ್ರಕರಣದಲ್ಲಿ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ರಕ್ಷಣೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದ್ದು ಈವರೆಗೂ ಸರ್ಕಾರ ಯಾವುದೇ ರಕ್ಷಣೆ ಒದಗಿಸಿಲ್ಲ” ಎಂದು ಸರ್ಕಾರದ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…