ಖ್ಯಾತ ಹಿನ್ನೆಲೆ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ (ಎಸ್ಪಿಬಿ) ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ ಎಂಬ ವದಂತಿಗಳು ಹರಿದಾಡಿದ ಕೆಲವೇ ಗಂಟೆಗಳ ಬಳಿಕ ಇದೀಗ ಅವರ ಪುತ್ರ ಎಸ್ಪಿ ಚರಣ್ ಸ್ಪಷ್ಟೀಕರಣ ನೀಡಿದ್ದಾರೆ.
ಫೇಸ್ಬುಕ್ ನಲ್ಲಿ ವೀಡಿಯೊ ಹೇಳಿಕೆ ಬಿಡುಗಡೆ ಮಾಡುವ ಮೂಲಕ “ಅಪ್ಪನಿಗೆ ಕೋವಿಡ್ ನೆಗೆಟಿವ್ ಬಂದಿದೆ ಎಂಬ ಮಾಹಿತಿ ನನ್ನಿಂದ ಹೇಳಲ್ಪಟ್ಟದ್ದಲ್ಲ. ವದಂತಿಗಳನ್ನು ಹರಡದಿರಿ, ವದಂತಿಗಳಿಗೆ ಕಿವಿ ಕೊಡದಿರಿ” ಎಂದು ಚರಣ್ ಹೇಳಿದ್ದಾರೆ.
ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಎಸ್ಪಿ ಚರಣ್ ಅವರು ಆಸ್ಪತ್ರೆಯಿಂದ ಎಸ್ಪಿಬಿಯ ಆರೋಗ್ಯ ಸ್ಥಿತಿಯ ಬಗ್ಗೆ ನೇರ ಮಾಹಿತಿ ಪಡೆಯುವ ಏಕೈಕ ವ್ಯಕ್ತಿ ನಾನು. . “ನಾನು ಸಾಮಾನ್ಯವಾಗಿ ಆಸ್ಪತ್ರೆಯ ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ನಂತರ ಅಪ್ಪನವರ ಆರೋಗ್ಯ ಸ್ಥಿತಿಯ ಬಗೆಗೆ ಪೋಸ್ಟ್ ಮಾಡುತ್ತೇನೆ. ಆದರೆ ದುರದೃಷ್ಟವಶಾತ್, ನಾನು ಬೆಳಿಗ್ಗೆ ಒಂದು ಪೋಸ್ಟ್ ಹಾಕಲು ಒತ್ತಡದಲ್ಲಿದ್ದೆ”
ಸೋಮವಾರ, ಎಸ್ಪಿಬಿ ಕೊರೋನಾವೈರಸ್ ನೆಗೆಟಿವ್ ವರದಿ ಸಿಕ್ಕಿದೆ ಎನ್ನುವ ವದಂತಿ ಎಲ್ಲೆಡೆ ಹರಡುತ್ತಿದೆ. ಇದು ದುರದೃಷ್ಟಕರ. “ಕೋವಿಡ್ ನೆಗೆಟಿವ್ ಅಥವಾ ಪಾಸಿಟಿವ್ ಏನೇ ಆಗಿದ್ದರೂ ಆರೋಗ್ಯ) ಸ್ಥಿತಿ ಇನ್ನೂ ಹಾಗೆಯೇ ಇದೆ, ” ಎಂದು ಅವರು ಹೇಳಿದರು. ಎಸ್ಪಿಬಿ ಅವರಿಗೆ ಲೈಫ್ ಸಪೋರ್ಟ್ ಅನ್ನು ಮುಂದುವರಿಸಲಾಗಿದೆ. , ಆದರೆ ಅವರ ಪ್ರಮುಖ ಆರೋಗ್ಯ ಸ್ಥಿತಿ ಸ್ಥಿರವಾಗಿವೆ. ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ನಂತರ ಇಂದು ಸಂಜೆ ಗಾಯಕನ ಆರೋಗ್ಯದ ಬಗ್ಗೆ ವಿವರ ನೀಡುತ್ತೇನೆ ಎಂದು ಅವರು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…