ಖ್ಯಾತ ಹಿನ್ನೆಲೆ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ (ಎಸ್ಪಿಬಿ) ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ ಎಂಬ ವದಂತಿಗಳು ಹರಿದಾಡಿದ ಕೆಲವೇ ಗಂಟೆಗಳ ಬಳಿಕ ಇದೀಗ ಅವರ ಪುತ್ರ ಎಸ್ಪಿ ಚರಣ್ ಸ್ಪಷ್ಟೀಕರಣ ನೀಡಿದ್ದಾರೆ.
ಫೇಸ್ಬುಕ್ ನಲ್ಲಿ ವೀಡಿಯೊ ಹೇಳಿಕೆ ಬಿಡುಗಡೆ ಮಾಡುವ ಮೂಲಕ “ಅಪ್ಪನಿಗೆ ಕೋವಿಡ್ ನೆಗೆಟಿವ್ ಬಂದಿದೆ ಎಂಬ ಮಾಹಿತಿ ನನ್ನಿಂದ ಹೇಳಲ್ಪಟ್ಟದ್ದಲ್ಲ. ವದಂತಿಗಳನ್ನು ಹರಡದಿರಿ, ವದಂತಿಗಳಿಗೆ ಕಿವಿ ಕೊಡದಿರಿ” ಎಂದು ಚರಣ್ ಹೇಳಿದ್ದಾರೆ.
ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಎಸ್ಪಿ ಚರಣ್ ಅವರು ಆಸ್ಪತ್ರೆಯಿಂದ ಎಸ್ಪಿಬಿಯ ಆರೋಗ್ಯ ಸ್ಥಿತಿಯ ಬಗ್ಗೆ ನೇರ ಮಾಹಿತಿ ಪಡೆಯುವ ಏಕೈಕ ವ್ಯಕ್ತಿ ನಾನು. . “ನಾನು ಸಾಮಾನ್ಯವಾಗಿ ಆಸ್ಪತ್ರೆಯ ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ನಂತರ ಅಪ್ಪನವರ ಆರೋಗ್ಯ ಸ್ಥಿತಿಯ ಬಗೆಗೆ ಪೋಸ್ಟ್ ಮಾಡುತ್ತೇನೆ. ಆದರೆ ದುರದೃಷ್ಟವಶಾತ್, ನಾನು ಬೆಳಿಗ್ಗೆ ಒಂದು ಪೋಸ್ಟ್ ಹಾಕಲು ಒತ್ತಡದಲ್ಲಿದ್ದೆ”
ಸೋಮವಾರ, ಎಸ್ಪಿಬಿ ಕೊರೋನಾವೈರಸ್ ನೆಗೆಟಿವ್ ವರದಿ ಸಿಕ್ಕಿದೆ ಎನ್ನುವ ವದಂತಿ ಎಲ್ಲೆಡೆ ಹರಡುತ್ತಿದೆ. ಇದು ದುರದೃಷ್ಟಕರ. “ಕೋವಿಡ್ ನೆಗೆಟಿವ್ ಅಥವಾ ಪಾಸಿಟಿವ್ ಏನೇ ಆಗಿದ್ದರೂ ಆರೋಗ್ಯ) ಸ್ಥಿತಿ ಇನ್ನೂ ಹಾಗೆಯೇ ಇದೆ, ” ಎಂದು ಅವರು ಹೇಳಿದರು. ಎಸ್ಪಿಬಿ ಅವರಿಗೆ ಲೈಫ್ ಸಪೋರ್ಟ್ ಅನ್ನು ಮುಂದುವರಿಸಲಾಗಿದೆ. , ಆದರೆ ಅವರ ಪ್ರಮುಖ ಆರೋಗ್ಯ ಸ್ಥಿತಿ ಸ್ಥಿರವಾಗಿವೆ. ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ನಂತರ ಇಂದು ಸಂಜೆ ಗಾಯಕನ ಆರೋಗ್ಯದ ಬಗ್ಗೆ ವಿವರ ನೀಡುತ್ತೇನೆ ಎಂದು ಅವರು ಹೇಳಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…