ಮಂಗಳೂರು, : ಅವಿಭಜಿತ ದ.ಕ. ಜಿಲ್ಲಾ ಎಸ್ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ನೇತೃತ್ವದ ಸಹಕಾರಿ ಕ್ಷೇತ್ರದ 16 ಅಭ್ಯರ್ಥಿಗಳು ‘ಸಹಕಾರ ಭಾರತಿ’ ವಿರುದ್ಧ ಜಯ ಗಳಿಸಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ, ಪಟ್ಟಣ ಸಹಕಾರ ಬ್ಯಾಂಕ್, ಕೃಷಿಯೇತರ ಪತ್ತಿನ ಸಹಕಾರ ಸಂಘ ಮತ್ತು ಇತರ ಎಲ್ಲ ಸಹಕಾರ ಸಂಘಗಳ ಪ್ರತಿನಿಧಿಗಳು ಮತ ಚಲಾಯಿಸಿದರು.
ಎಂ.ಎನ್.ರಾಜೇಂದ್ರಕುಮಾರ್, ಭಾಸ್ಕರ್ ಎಸ್. ಕೋಟ್ಯಾನ್, ವಿನಯಕುಮಾರ್ ಸೂರಿಂಜೆ, ಕೆ.ಹರೀಶ್ಚಂದ್ರ, ಎಸ್.ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ, ದೇವಿಪ್ರಸಾದ್ ಶೆಟ್ಟಿ, ಬಿ.ಅಶೋಕಕುಮಾರ್ ಶೆಟ್ಟಿ, ಕೆ.ಎಸ್.ದೇವರಾಜ್, ಶಶಿಕುಮಾರ್ ರೈ ಬಿ., ಎಂ.ವಾದಿರಾಜ ಶೆಟ್ಟಿ, ಬಿ.ನಿರಂಜನ, ಟಿ.ಜಿ.ರಾಜರಾಮ್ ಭಟ್, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಜೈರಾಜ್ ಬಿ. ರೈ, ಎಸ್.ಬಿ. ರೈ ಜಯ ಗಳಿಸಿದ್ದಾರೆ.
ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ರಿಟರ್ನಿಂಗ್ ಅಧಿಕಾರಿ ರವಿಚಂದ್ರ ನಾಯಕ್ ‘ಅಭ್ಯರ್ಥಿಗಳು ಕ್ರಮಬದ್ಧವಾಗಿ ಚುನಾಯಿತರಾಗಿದ್ದಾರೆ’ ಎಂದು ಘೋಷಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…