ಮಂಗಳೂರು, : ಅವಿಭಜಿತ ದ.ಕ. ಜಿಲ್ಲಾ ಎಸ್ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ನೇತೃತ್ವದ ಸಹಕಾರಿ ಕ್ಷೇತ್ರದ 16 ಅಭ್ಯರ್ಥಿಗಳು ‘ಸಹಕಾರ ಭಾರತಿ’ ವಿರುದ್ಧ ಜಯ ಗಳಿಸಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ, ಪಟ್ಟಣ ಸಹಕಾರ ಬ್ಯಾಂಕ್, ಕೃಷಿಯೇತರ ಪತ್ತಿನ ಸಹಕಾರ ಸಂಘ ಮತ್ತು ಇತರ ಎಲ್ಲ ಸಹಕಾರ ಸಂಘಗಳ ಪ್ರತಿನಿಧಿಗಳು ಮತ ಚಲಾಯಿಸಿದರು.
ಎಂ.ಎನ್.ರಾಜೇಂದ್ರಕುಮಾರ್, ಭಾಸ್ಕರ್ ಎಸ್. ಕೋಟ್ಯಾನ್, ವಿನಯಕುಮಾರ್ ಸೂರಿಂಜೆ, ಕೆ.ಹರೀಶ್ಚಂದ್ರ, ಎಸ್.ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ, ದೇವಿಪ್ರಸಾದ್ ಶೆಟ್ಟಿ, ಬಿ.ಅಶೋಕಕುಮಾರ್ ಶೆಟ್ಟಿ, ಕೆ.ಎಸ್.ದೇವರಾಜ್, ಶಶಿಕುಮಾರ್ ರೈ ಬಿ., ಎಂ.ವಾದಿರಾಜ ಶೆಟ್ಟಿ, ಬಿ.ನಿರಂಜನ, ಟಿ.ಜಿ.ರಾಜರಾಮ್ ಭಟ್, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಜೈರಾಜ್ ಬಿ. ರೈ, ಎಸ್.ಬಿ. ರೈ ಜಯ ಗಳಿಸಿದ್ದಾರೆ.
ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ರಿಟರ್ನಿಂಗ್ ಅಧಿಕಾರಿ ರವಿಚಂದ್ರ ನಾಯಕ್ ‘ಅಭ್ಯರ್ಥಿಗಳು ಕ್ರಮಬದ್ಧವಾಗಿ ಚುನಾಯಿತರಾಗಿದ್ದಾರೆ’ ಎಂದು ಘೋಷಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…