ಎಸ್‌.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ : ಕಾಂಗ್ರೆಸ್‌ – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಅಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ? : ಕಾಂಗ್ರೆಸ್‌

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ , ಕಾಂಗ್ರೆಸ್‌ನಲ್ಲಿ ಅಗ್ರಗಣ್ಯ ನಾಯಕರಾಗಿದ್ದ ಹಿರಿಯ ನಾಯಕ ಕೃಷ್ಣ ಅವರ ಬಳಿ ಆಡಳಿತಾತ್ಮಕ ಸಲಹೆ ಕೇಳುವ ಮನಸ್ಸು ಬಿಜೆಪಿಗರಿಗೆ ಇಲ್ಲ. ಅವರ ಸಲಹೆ ಬಿಜೆಪಿಗೆ ಬೇಕಾಗಿಯೂ ಇಲ್ಲ. ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಅಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ? ಎಂದು ಕಾಂಗ್ರೆಸ್‌ ಮಾರ್ಮಿಕವಾಗಿ ಟ್ವೀಟ್ ಮಾಡಿದೆ.

“ನನಗೆ 90 ವರ್ಷವಾಯ್ತು, ವಯಸ್ಸಿನ ಅರಿವು ನಮಗಿರಬೇಕು, 90ರ ಈ ವಯಸ್ಸಿನಲ್ಲಿ 50 ವರ್ಷ ವಯಸ್ಸಾದವರಂತೆ ನಟನೆ ಮಾಡಲು ಆಗುವುದಿಲ್ಲ. ಹೀಗಾಗಿ, ಕ್ರಮೇಣ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್‌.ಎಂ.ಕೃಷ್ಣ ರಾಜಕೀಯದಿಂದ ನಿವೃತ್ತಯಾಗುತ್ತಿರುವುದಾಗಿ ಹೊಸ ವರ್ಷದ ಸಂದೇಶ ನೀಡುವ ಸಂದರ್ಭದಲ್ಲಿ ತಿಳಿಸಿದ್ದರು.

ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ : ಗೇಲ್‌ ಕಂಪೆನಿ ಅಧಿಕಾರಿಗಳಿಗೆ ಭರತ್‌ ಶೆಟ್ಟಿ ಎಚ್ಚರಿಕೆ – Vishwanews24

‘ನಿವೃತ್ತಿ ಆಗುತ್ತಿದ್ದೇನೆ ಎಂದರೆ ಸನ್ಯಾಸ ಪಡೆಯುತ್ತಿದ್ದೇನೆ ಎಂದಲ್ಲ. ಪಕ್ಷ ಅಥವಾ ನಾಯಕರು ಸಂಘಟನೆ ಮತ್ತು ಇತರ ವಿಚಾರಗಳಲ್ಲಿ ಸಲಹೆಗಳನ್ನು ಕೇಳಿದರೆ ನೀಡಲು ಸಿದ್ಧನಿದ್ದೇನೆ. ಆದರೆ ನಾನಾಗಿಯೇ ಮೇಲೆ ಬಿದ್ದು ಸಲಹೆ ನೀಡಲು ಹೋಗುವುದಿಲ್ಲ. ಹಳೇ ಮೈಸೂರು ಭಾಗದಲ್ಲಿ ಸಂಘಟನೆಯ ವಿಚಾರದಲ್ಲಿ ಸಲಹೆ ನೀಡಿದರೆ ಕೊಡುತ್ತೇನೆ’ ಎಂದಿದ್ದಾರೆ.

‘ನಾನಾಗಿಯೇ ರಾಜಕೀಯದಿಂದ ಹಿಂದಕ್ಕೆ ಸರಿಯುತ್ತಿರುವುದರಿಂದ ನನ್ನನ್ನು ಪಕ್ಷ ನಿರ್ಲಕ್ಷಿಸುತ್ತಿದೆ ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಗೋವಾ :ವಿಮಾನ ನಿಲ್ದಾಣಕ್ಕೆ ‘ಮನೋಹರ್ ಪರಿಕ್ಕರ್’ ಹೆಸರಿಡಲು ಕ್ಯಾಬಿನೆಟ್ ಅನುಮೋದನೆ – Vishwanews24

Leave a Reply