Featured

ಎಸ್‌.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ : ಕಾಂಗ್ರೆಸ್‌ – Vishwanews24

ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಅಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ? : ಕಾಂಗ್ರೆಸ್‌

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ , ಕಾಂಗ್ರೆಸ್‌ನಲ್ಲಿ ಅಗ್ರಗಣ್ಯ ನಾಯಕರಾಗಿದ್ದ ಹಿರಿಯ ನಾಯಕ ಕೃಷ್ಣ ಅವರ ಬಳಿ ಆಡಳಿತಾತ್ಮಕ ಸಲಹೆ ಕೇಳುವ ಮನಸ್ಸು ಬಿಜೆಪಿಗರಿಗೆ ಇಲ್ಲ. ಅವರ ಸಲಹೆ ಬಿಜೆಪಿಗೆ ಬೇಕಾಗಿಯೂ ಇಲ್ಲ. ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಅಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ? ಎಂದು ಕಾಂಗ್ರೆಸ್‌ ಮಾರ್ಮಿಕವಾಗಿ ಟ್ವೀಟ್ ಮಾಡಿದೆ.

“ನನಗೆ 90 ವರ್ಷವಾಯ್ತು, ವಯಸ್ಸಿನ ಅರಿವು ನಮಗಿರಬೇಕು, 90ರ ಈ ವಯಸ್ಸಿನಲ್ಲಿ 50 ವರ್ಷ ವಯಸ್ಸಾದವರಂತೆ ನಟನೆ ಮಾಡಲು ಆಗುವುದಿಲ್ಲ. ಹೀಗಾಗಿ, ಕ್ರಮೇಣ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್‌.ಎಂ.ಕೃಷ್ಣ ರಾಜಕೀಯದಿಂದ ನಿವೃತ್ತಯಾಗುತ್ತಿರುವುದಾಗಿ ಹೊಸ ವರ್ಷದ ಸಂದೇಶ ನೀಡುವ ಸಂದರ್ಭದಲ್ಲಿ ತಿಳಿಸಿದ್ದರು.

‘ನಿವೃತ್ತಿ ಆಗುತ್ತಿದ್ದೇನೆ ಎಂದರೆ ಸನ್ಯಾಸ ಪಡೆಯುತ್ತಿದ್ದೇನೆ ಎಂದಲ್ಲ. ಪಕ್ಷ ಅಥವಾ ನಾಯಕರು ಸಂಘಟನೆ ಮತ್ತು ಇತರ ವಿಚಾರಗಳಲ್ಲಿ ಸಲಹೆಗಳನ್ನು ಕೇಳಿದರೆ ನೀಡಲು ಸಿದ್ಧನಿದ್ದೇನೆ. ಆದರೆ ನಾನಾಗಿಯೇ ಮೇಲೆ ಬಿದ್ದು ಸಲಹೆ ನೀಡಲು ಹೋಗುವುದಿಲ್ಲ. ಹಳೇ ಮೈಸೂರು ಭಾಗದಲ್ಲಿ ಸಂಘಟನೆಯ ವಿಚಾರದಲ್ಲಿ ಸಲಹೆ ನೀಡಿದರೆ ಕೊಡುತ್ತೇನೆ’ ಎಂದಿದ್ದಾರೆ.

‘ನಾನಾಗಿಯೇ ರಾಜಕೀಯದಿಂದ ಹಿಂದಕ್ಕೆ ಸರಿಯುತ್ತಿರುವುದರಿಂದ ನನ್ನನ್ನು ಪಕ್ಷ ನಿರ್ಲಕ್ಷಿಸುತ್ತಿದೆ ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago