ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ , ಕಾಂಗ್ರೆಸ್ನಲ್ಲಿ ಅಗ್ರಗಣ್ಯ ನಾಯಕರಾಗಿದ್ದ ಹಿರಿಯ ನಾಯಕ ಕೃಷ್ಣ ಅವರ ಬಳಿ ಆಡಳಿತಾತ್ಮಕ ಸಲಹೆ ಕೇಳುವ ಮನಸ್ಸು ಬಿಜೆಪಿಗರಿಗೆ ಇಲ್ಲ. ಅವರ ಸಲಹೆ ಬಿಜೆಪಿಗೆ ಬೇಕಾಗಿಯೂ ಇಲ್ಲ. ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಅಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ? ಎಂದು ಕಾಂಗ್ರೆಸ್ ಮಾರ್ಮಿಕವಾಗಿ ಟ್ವೀಟ್ ಮಾಡಿದೆ.
“ನನಗೆ 90 ವರ್ಷವಾಯ್ತು, ವಯಸ್ಸಿನ ಅರಿವು ನಮಗಿರಬೇಕು, 90ರ ಈ ವಯಸ್ಸಿನಲ್ಲಿ 50 ವರ್ಷ ವಯಸ್ಸಾದವರಂತೆ ನಟನೆ ಮಾಡಲು ಆಗುವುದಿಲ್ಲ. ಹೀಗಾಗಿ, ಕ್ರಮೇಣ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ರಾಜಕೀಯದಿಂದ ನಿವೃತ್ತಯಾಗುತ್ತಿರುವುದಾಗಿ ಹೊಸ ವರ್ಷದ ಸಂದೇಶ ನೀಡುವ ಸಂದರ್ಭದಲ್ಲಿ ತಿಳಿಸಿದ್ದರು.
‘ನಿವೃತ್ತಿ ಆಗುತ್ತಿದ್ದೇನೆ ಎಂದರೆ ಸನ್ಯಾಸ ಪಡೆಯುತ್ತಿದ್ದೇನೆ ಎಂದಲ್ಲ. ಪಕ್ಷ ಅಥವಾ ನಾಯಕರು ಸಂಘಟನೆ ಮತ್ತು ಇತರ ವಿಚಾರಗಳಲ್ಲಿ ಸಲಹೆಗಳನ್ನು ಕೇಳಿದರೆ ನೀಡಲು ಸಿದ್ಧನಿದ್ದೇನೆ. ಆದರೆ ನಾನಾಗಿಯೇ ಮೇಲೆ ಬಿದ್ದು ಸಲಹೆ ನೀಡಲು ಹೋಗುವುದಿಲ್ಲ. ಹಳೇ ಮೈಸೂರು ಭಾಗದಲ್ಲಿ ಸಂಘಟನೆಯ ವಿಚಾರದಲ್ಲಿ ಸಲಹೆ ನೀಡಿದರೆ ಕೊಡುತ್ತೇನೆ’ ಎಂದಿದ್ದಾರೆ.
‘ನಾನಾಗಿಯೇ ರಾಜಕೀಯದಿಂದ ಹಿಂದಕ್ಕೆ ಸರಿಯುತ್ತಿರುವುದರಿಂದ ನನ್ನನ್ನು ಪಕ್ಷ ನಿರ್ಲಕ್ಷಿಸುತ್ತಿದೆ ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…