Featured

ಎಸ್.ಎಸ್.ಎಲ್.ಸಿ ಪರೀಕ್ಷೆ : ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ -Vishwanews24

ಉಡುಪಿ,  : ಉಡುಪಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯು ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆಗಳು ನಡೆಯುವ ದಿನಗಳಂದು ಬೆಳಗ್ಗೆ 8 ರಿಂದ ರಾತ್ರಿ 6 ರ ವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.

ಈ ಆದೇಶದಂತೆ ಪರೀಕ್ಷಾ ಕೇಂದ್ರಗಳ ಸುತ್ತ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವುದು, ಯಾವುದೇ ಸಾರ್ವಜನಿಕರು 5 ಜನ ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ನಿಷೇಧಿತ ಪ್ರದೇಶವೆಂದು ಜಾರಿಗೊಳಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದು, ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವುದು, ಪರೀಕ್ಷಾ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹೊರಗಿನ ವ್ಯಕ್ತಿಗಳು ಯಾವುದೇ ರೀತಿಯ ಬೆದರಿಕೆ ಒಡ್ಡುವುದನ್ನು, ನಿಷೇಧಿತ ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್ ಬಳಕೆಯನ್ನು, ಪರೀಕ್ಷಾ ಗೌಪ್ಯ ಸಾಮಾಗ್ರಿಗಳನ್ನು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದಿಂದ ಹೊರಗಡೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದ್ದು, ಈ ನಿಷೇಧಾಜ್ಞೆ ಆದೇಶವು ಸರಕಾರದಿಂದ ಅಥವಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ, ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

46 minutes ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

5 hours ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

8 hours ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

9 hours ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

9 hours ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

10 hours ago