Featured

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಕೈ ಗಡಿಯಾರ ನಿಷೇಧ..!!

ಬೆಂಗಳೂರು,: ಪರೀಕ್ಷಾ ಕೇಂದ್ರಗಳಲ್ಲಿನ ನಕಲು ತಡೆಯುವ ಉದ್ದೇಶದಿಂದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವೇಳೆ ಕೈ ಗಡಿಯಾರ ಕಟ್ಟಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವುದಕ್ಕೆ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿಷೇಧ ಹೇರಲಾಗಿದೆ..

ಮುಂದಿನ ವರ್ಷ ನಡೆಯಲಿರುವ ಎಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಿಂದ ಈ ನಿಯಮ ಅನ್ವಯವಾಗಲಿದ್ದು, ಪರ್ಯಾಯ ಮಾರ್ಗವಾಗಿ ಪರೀಕ್ಷಾ ಕೇಂದ್ರಗಳಲ್ಲೆ ಗೋಡೆ ಗಡಿಯಾರ ಹಾಕಲು ನಿರ್ಧರಿಸಿದೆ..

ಇತ್ತೀಚಿನ ದಿನಗಳಲ್ಲಿ ಆಧುನಿಕ ಶೈಲಿಯ ಕೈಗಡಿಯಾರಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಿವೆ. ಅವುಗಳಲ್ಲಿ ಕೆಲವೊಂದರಲ್ಲಿ ರೆಕಾರ್ಡಿಂಗ್ ವ್ಯವಸ್ಥೆಯನ್ನು ಹೊಂದಿರುವ ವಾಚ್ ಗಳಿರುತ್ತವೆ. ಎಲೆಕ್ಟ್ರಾನಿಕ್ ಗಡಿಯಾರಗಳ ಮೂಲಕ ನಕಲು ಮಾಡುವುದು ಸುಲಭವಾಗಿದೆ. ಈ ವಾಚ್‌ಗಳು ಬ್ಲೂಟೂತ್‌ಗಳ ಮೂಲಕ ಸ್ಮಾರ್ಟ್ ಫೋನ್‌ಗಳಿಗೆ ಸಂಪರ್ಕ ಕಲ್ಪಿಸಿ ಸುಲಭ ರೀತಿಯಲ್ಲಿ ನಕಲು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಣ ಮಂಡಳಿ ರಿಸ್ಟ್ ವಾಚ್ ಗಳಿಗೆ ನಿಷೇಧ ಹೇರಿದೆ.

ಬದಲಿಗೆ ಪರೀಕ್ಷೆ ಬರೆಯುವಂತಹ ವಿದ್ಯಾರ್ಥಿಗಳಿಗೆ ನೆರವಾಗಲು ಪ್ರತಿಯೊಂದು ಕೊಠಡಿಗಳಲ್ಲೂ ಗಡಿಯಾರಗಳನ್ನು ಅಳವಡಿಸಲು ತೀರ್ಮಾನಿಸಿದೆ. ಹಾಗೂ ಪರೀಕ್ಷಾ ವೇಳಾಪಟ್ಟಿ ಅಂತಿಮವಾದ ಬಳಿಕ ಎಲ್ಲಾ ಕೇಂದ್ರಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಲು ಮಂಡಳಿ ತೀರ್ಮಾನಿಸಿದೆ.

Vishwa News 24

Recent Posts

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

5 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

12 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

34 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago