ಬೆಂಗಳೂರು,: ಪರೀಕ್ಷಾ ಕೇಂದ್ರಗಳಲ್ಲಿನ ನಕಲು ತಡೆಯುವ ಉದ್ದೇಶದಿಂದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವೇಳೆ ಕೈ ಗಡಿಯಾರ ಕಟ್ಟಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವುದಕ್ಕೆ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿಷೇಧ ಹೇರಲಾಗಿದೆ..
ಮುಂದಿನ ವರ್ಷ ನಡೆಯಲಿರುವ ಎಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಿಂದ ಈ ನಿಯಮ ಅನ್ವಯವಾಗಲಿದ್ದು, ಪರ್ಯಾಯ ಮಾರ್ಗವಾಗಿ ಪರೀಕ್ಷಾ ಕೇಂದ್ರಗಳಲ್ಲೆ ಗೋಡೆ ಗಡಿಯಾರ ಹಾಕಲು ನಿರ್ಧರಿಸಿದೆ..
ಇತ್ತೀಚಿನ ದಿನಗಳಲ್ಲಿ ಆಧುನಿಕ ಶೈಲಿಯ ಕೈಗಡಿಯಾರಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಿವೆ. ಅವುಗಳಲ್ಲಿ ಕೆಲವೊಂದರಲ್ಲಿ ರೆಕಾರ್ಡಿಂಗ್ ವ್ಯವಸ್ಥೆಯನ್ನು ಹೊಂದಿರುವ ವಾಚ್ ಗಳಿರುತ್ತವೆ. ಎಲೆಕ್ಟ್ರಾನಿಕ್ ಗಡಿಯಾರಗಳ ಮೂಲಕ ನಕಲು ಮಾಡುವುದು ಸುಲಭವಾಗಿದೆ. ಈ ವಾಚ್ಗಳು ಬ್ಲೂಟೂತ್ಗಳ ಮೂಲಕ ಸ್ಮಾರ್ಟ್ ಫೋನ್ಗಳಿಗೆ ಸಂಪರ್ಕ ಕಲ್ಪಿಸಿ ಸುಲಭ ರೀತಿಯಲ್ಲಿ ನಕಲು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಣ ಮಂಡಳಿ ರಿಸ್ಟ್ ವಾಚ್ ಗಳಿಗೆ ನಿಷೇಧ ಹೇರಿದೆ.
ಬದಲಿಗೆ ಪರೀಕ್ಷೆ ಬರೆಯುವಂತಹ ವಿದ್ಯಾರ್ಥಿಗಳಿಗೆ ನೆರವಾಗಲು ಪ್ರತಿಯೊಂದು ಕೊಠಡಿಗಳಲ್ಲೂ ಗಡಿಯಾರಗಳನ್ನು ಅಳವಡಿಸಲು ತೀರ್ಮಾನಿಸಿದೆ. ಹಾಗೂ ಪರೀಕ್ಷಾ ವೇಳಾಪಟ್ಟಿ ಅಂತಿಮವಾದ ಬಳಿಕ ಎಲ್ಲಾ ಕೇಂದ್ರಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಲು ಮಂಡಳಿ ತೀರ್ಮಾನಿಸಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…