Featured

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಕೈ ಗಡಿಯಾರ ನಿಷೇಧ..!!

ಬೆಂಗಳೂರು,: ಪರೀಕ್ಷಾ ಕೇಂದ್ರಗಳಲ್ಲಿನ ನಕಲು ತಡೆಯುವ ಉದ್ದೇಶದಿಂದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವೇಳೆ ಕೈ ಗಡಿಯಾರ ಕಟ್ಟಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವುದಕ್ಕೆ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿಷೇಧ ಹೇರಲಾಗಿದೆ..

ಮುಂದಿನ ವರ್ಷ ನಡೆಯಲಿರುವ ಎಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಿಂದ ಈ ನಿಯಮ ಅನ್ವಯವಾಗಲಿದ್ದು, ಪರ್ಯಾಯ ಮಾರ್ಗವಾಗಿ ಪರೀಕ್ಷಾ ಕೇಂದ್ರಗಳಲ್ಲೆ ಗೋಡೆ ಗಡಿಯಾರ ಹಾಕಲು ನಿರ್ಧರಿಸಿದೆ..

ಇತ್ತೀಚಿನ ದಿನಗಳಲ್ಲಿ ಆಧುನಿಕ ಶೈಲಿಯ ಕೈಗಡಿಯಾರಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಿವೆ. ಅವುಗಳಲ್ಲಿ ಕೆಲವೊಂದರಲ್ಲಿ ರೆಕಾರ್ಡಿಂಗ್ ವ್ಯವಸ್ಥೆಯನ್ನು ಹೊಂದಿರುವ ವಾಚ್ ಗಳಿರುತ್ತವೆ. ಎಲೆಕ್ಟ್ರಾನಿಕ್ ಗಡಿಯಾರಗಳ ಮೂಲಕ ನಕಲು ಮಾಡುವುದು ಸುಲಭವಾಗಿದೆ. ಈ ವಾಚ್‌ಗಳು ಬ್ಲೂಟೂತ್‌ಗಳ ಮೂಲಕ ಸ್ಮಾರ್ಟ್ ಫೋನ್‌ಗಳಿಗೆ ಸಂಪರ್ಕ ಕಲ್ಪಿಸಿ ಸುಲಭ ರೀತಿಯಲ್ಲಿ ನಕಲು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಣ ಮಂಡಳಿ ರಿಸ್ಟ್ ವಾಚ್ ಗಳಿಗೆ ನಿಷೇಧ ಹೇರಿದೆ.

ಬದಲಿಗೆ ಪರೀಕ್ಷೆ ಬರೆಯುವಂತಹ ವಿದ್ಯಾರ್ಥಿಗಳಿಗೆ ನೆರವಾಗಲು ಪ್ರತಿಯೊಂದು ಕೊಠಡಿಗಳಲ್ಲೂ ಗಡಿಯಾರಗಳನ್ನು ಅಳವಡಿಸಲು ತೀರ್ಮಾನಿಸಿದೆ. ಹಾಗೂ ಪರೀಕ್ಷಾ ವೇಳಾಪಟ್ಟಿ ಅಂತಿಮವಾದ ಬಳಿಕ ಎಲ್ಲಾ ಕೇಂದ್ರಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಲು ಮಂಡಳಿ ತೀರ್ಮಾನಿಸಿದೆ.

Vishwa News 24

Recent Posts

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

14 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

23 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

38 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

53 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago