Featured

ಎಸ್ ಸಿಡಿಸಿಸಿ ಬ್ಯಾಂಕ್ ರಾಷ್ಟ್ರ ಮಟ್ಟದಲ್ಲಿ ಸೇವೆಯನ್ನು ಮಾಡಿ ಗ್ರಾಹಕರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ : ವೇದವ್ಯಾಸ ಕಾಮತ್ -Vishwanews24

ಮಂಗಳೂರು, : ಬ್ಯಾಂಕ್ ಕ್ಷೇತ್ರದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಮಾಡದ ಸೇವೆಗಳನ್ನು ಸಹಕಾರಿ ಬ್ಯಾಂಕುಗಳು ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸ್ಥಳಾಂತರ ಗೊಂಡ ಶಾಖೆಯನ್ನು ಕಂಕನಾಡಿ ಬೈಪಾಸ್ ರಸ್ತೆ ಬಳಿ ಇರುವ ಕಣಚೂರು ಕಾಂಪ್ಲೆಕ್ಸ್ ಕಟ್ಟಡದಲ್ಲಿಂದು ಅವರು ಉದ್ಘಾಟಿಸಿ ಮಾತನಾಡುತ್ತಿದ್ದರು.

ಎಸ್ ಸಿಡಿಸಿಸಿ ಬ್ಯಾಂಕ್ ರಾಷ್ಟ್ರ ಮಟ್ಟದಲ್ಲಿ ಗುರುತಿಸುವ ರೀತಿಯ ಸೇವೆಯನ್ನು ಮಾಡಿ ಗ್ರಾಹಕರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ. ಸಮರ್ಥ ನಾಯಕತ್ವ, ಉತ್ತಮ ಗ್ರಾಹಕ ಸೇವೆಯಿಂದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನೆ ಮಾಡಿದೆ ಎಂದು ವೇದವ್ಯಾಸ ಕಾಮತ್ ಶ್ಲಾಘಿಸಿದರು.

ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ , ಬ್ಯಾಂಕ್ ನ ಠೇವಣಿ ಕಳೆದ 25 ವರ್ಷ ಗಳಲ್ಲಿ 25 ಕೋಟಿಯಿಂದ 3,500 ಕೋಟಿ ರೂಗೆ ಏರಿಕೆಯಾಗಿದೆ. ಜನರ ಬಳಿಗೆ ಹೋಗಿ ಸೇವೆ ಸಲ್ಲಿಸಬೇಕು ಎನ್ನುವ ನೆಲೆಯಲ್ಲಿ ಶಾಖೆಯ ವಿಸ್ತರಣೆ, ಸ್ಥಳಾಂತರ, ಶಾಖೆಯನ್ನು ಜನರ ಬಳಿ ತೆಗೆದುಕೊಂಡು ಹೋಗುತ್ತಿದ್ದೇವೆ. ಸಮಾಜದ ಅತ್ಯಂತ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಗ್ರಾಹಕ ಸೇವೆ ದೊರೆಯಬೇಕು ಎನ್ನುವುದು ನಮ್ಮ ಗುರಿ ಇದೆ. ಸಹಕಾರಿ ಕ್ಷೇತ್ರದ ಮೇಲೆ ಜನರ ವಿಶ್ವಾಸ ಹೆಚ್ಚುತ್ತಿದೆ. ಸಹಕಾರಿ ಕ್ಷೇತ್ರವನ್ನು ಬಲಿಷ್ಠಗೊಳಿಸಬೇಕಾಗಿದೆ ಎಂದು  ತಿಳಿಸಿದರು.

ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಟಿ.ಜಿ. ರಾಜಾರಾಮ್ ಭಟ್, ಭಾಸ್ಕರ ಎಸ್ ಕೋಟ್ಯಾನ್, ಸದಾಶಿವ ಉಳ್ಳಾಲ್, ಜಯರಾಮ ರೈ, ವಾದಿರಾಜ ಶೆಟ್ಟಿ, ಶಶಿ ಕುಮಾರ್ ರೈ, ಮಹೇಶ್ ಹೆಗ್ಡೆ, ಜಯರಾಜ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಜಿ, ಶಾಖಾ ವ್ಯವಸ್ಥಾಪಕರಾದ ಮಮತಾ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

2 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

2 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

3 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

5 hours ago