Featured

ಎ. 1ರಿಂದ ಅಗತ್ಯ ಔಷಧಗಳ ಬೆಲೆ ಶೇ. 12ರಷ್ಟು ಏರಿಕೆ – Vishwanews24

ಜನಸಾಮಾನ್ಯರಿಗೆ ಮತ್ತೊಂದು ಶಾಕ್ – ಎ. 1ರಿಂದ ಅಗತ್ಯ ಔಷಧಗಳ ಬೆಲೆ ಶೇ. 12ರಷ್ಟು ಏರಿಕೆ

ಹೊಸದಿಲ್ಲಿ: ಈಗಾಗಲೇ ಅವಶ್ಯಕ ವಸ್ತುಗಳ ಬೆಲೆಯಿಂದ ಹೈರಾಣಾಗಿರುವ ಜನತೆ ಇನ್ನು ಔಷಧಗಳ ಬೆಲೆ ಏರಿಕೆಯ ಆಘಾತ ಎದುರಿಸಲಿದ್ದಾರೆ. ಅಗತ್ಯದ ಔಷಧಗಳ ಬೆಲೆ ಎ. 1ರಿಂದ ಶೇ. 12.12ರಷ್ಟು ಏರಿಕೆಯಾಗಲಿದೆ. ಇದು ಔಷಧಗಳ ಬೆಲೆಯಲ್ಲಿ ದಾಖಲೆಯ ಅತ್ಯಧಿಕ ಹೆಚ್ಚಳವಾಗಿದೆ.

ಶೆಡ್ಯೂಲ್ಡ್ ಔಷಧಗಳ ಬೆಲೆಯನ್ನು ಎ. 1ರಿಂದ ಶೇ. 12.12 ಏರಿಕೆ ಮಾಡಲು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ಸೋಮವಾರ ಅನುಮೋದನೆ ನೀಡಿದೆ.

ಇದರಲ್ಲಿ ನೋವು ನಿವಾರಕ, ಆಯಂಟಿ ಬಯೋಟಿಕ್, ಉರಿಯೂತ ನಿವಾರಕ ಔಷಧ, ಹೃದ್ರೋಗ ಔಷಧ ಸೇರಿದಂತೆ ರಾಷ್ಟ್ರೀಯ ಅಗತ್ಯದ ಔಷಧಗಳ ಪಟ್ಟಿಯ 800 ಔಷಧಗಳು ಒಳಗೊಳ್ಳಲಿವೆ. ಕಳೆದ ವರ್ಷ ಈ ಔಷಧಗಳ ಬೆಲೆಯನ್ನು ಶೇ. 10.76ರಷ್ಟು ಏರಿಕೆ ಮಾಡಲು ಎನ್‌ಪಿಪಿಎ ಅನುಮತಿ ನೀಡಿತ್ತು.

ಎನ್‌ಪಿಪಿಎ ಬೆಲೆ ನಿಯಂತ್ರಿಸುವ 800 ಔಷಧಗಳನ್ನು ಶೆಡ್ಯೂಲ್ಡ್ ಡ್ರಗ್ಸ್ ಎಂದು ವರ್ಗೀಕರಿಸಲಾಗುತ್ತದೆ. ನಾನ್ ಶೆಡ್ಯೂಲ್ಡ್ ಔಷಧಗಳ ಬೆಲೆಗಳು ಪ್ರಾಧಿಕಾರದ ನಿಯಂತ್ರಣದಲ್ಲಿ ಇರುವುದಿಲ್ಲ. ಅವುಗಳ ಬೆಲೆಯನ್ನು ವಾರ್ಷಿಕ ಗರಿಷ್ಠ ಶೇ. 10 ಹೆಚ್ಚಿಸಲು ಅವಕಾಶವಿದೆ.

800 ಔಷಧಗಳನ್ನು ಹೊರತುಪಡಿಸಿ ಇನ್ನುಳಿದ ಔಷಧಗಳ ಬೆಲೆ ಏರಿಕೆಗೂ ರಾಷ್ಟ್ರೀಯ ಔಷಧ ಪ್ರಾಧಿಕಾರ ಅನುಮತಿ ನೀಡಿದೆ. ಇತರ ಔಷಧಗಳ ಬೆಲೆ ಶೇಕಡಾ 10ರಷ್ಟು ಏರಿಕೆ ಮಾಡಲು ಅನುಮತಿ ನೀಡಿದೆ.

ಔಷಧಗಳ ಬೆಲೆ ವಿಪರೀತ ಏರಿಕೆಯ ಬಗ್ಗೆ ಕೇಂದ್ರ ಸರಕಾರ ಮಧ್ಯೆ ಪ್ರವೇಶಿಸಬೇಕು ಎಂದು ಅಖಿಲ ಭಾರತ ಔಷಧ ಕ್ರಿಯಾ ಜಾಲದ ಸಹ ಸಂಚಾಲಕಿ ಮಾಲಿನಿ ಐಸೋಲಾ ಅವರು ತಿಳಿಸಿದ್ದಾರೆ.

ಈ ರೀತಿ ಮತ್ತೆ ಮತ್ತೆ ಬೆಲೆ ಏರಿಕೆಯು ಅಗತ್ಯ ಔಷಧಗಳ ಬೆಲೆ ನಿಗದಿಯ ಉದ್ದೇಶವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago