ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಜನಾಕ್ರೋಶ ಯಾತ್ರೆ’ಯು ಎ.10ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿ.ವೈ ವಿಜಯೇಂದ್ರ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಂತರ ಕಲ್ಸಂಕ, ಕಡಿಯಾಳಿ ಮಾರ್ಗವಾಗಿ ಬಿಜೆಪಿ ಕಚೇರಿಯ ಹಿಂಭಾಗದ ಮೈದಾನದವರೆಗೆ ಪ್ರತಿಭಟನಾ ಜಾಥಾ ಸಾಗಿ ಬರಲಿದೆ. ಬಳಿಕ ಮೈದಾನದಲ್ಲಿ ಬಹೃತ್ ಪ್ರತಿಭಟನಾ ಸಮಾವೇಶ ನಡೆಯಲಿದೆ ಎಂದರು.
ಜಾಥಾದಲ್ಲಿ ವಿವಿಧ ಮೋರ್ಚಾ, ಮಂಡಲಗಳಿಂದ ವಿನೂತನ ಟ್ಯಾಬ್ಲೋ ನಿರ್ಮಿಸಿ, ಅದರ ಮೂಲಕ ಸರಕಾರದ ಜನವಿರೋಧಿ ನೀತಿಗೆ ಖಂಡನೆ ವ್ಯಕ್ತಪಡಿಸಲಾಗುವುದು.
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ತಂಡದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ್ ಶೆಟ್ಟಿ, ರಾಘವೇಂದ್ರ ಕಿಣಿ, ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…