ಕಾರ್ಕಳ: ವಿಧಾನಸಭೆಯ ಚುನಾವಣೆಗೆ ಪಕ್ಷ ಅಧಿಕೃತ ಅಭ್ಯರ್ಥಿಯನ್ನಾಗಿ ತನ್ನನ್ನು ಘೋಷಣೆ ಮಾಡಿದೆ. ಚುನಾವಣಾ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ ಎ. 13ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಮಂಜುನಾಥ ಪೈ ಸಭಾಭವನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದರು.
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸಕಲ ಸಿದ್ದತೆಯನ್ನು ಬಿಜೆಪಿ ನಡೆಸುತ್ತಿದೆ ಎಂದರು.
ಎ. 18ರಂದು ಮನೆಮನೆ ಸಂಪರ್ಕದ ಅಭಿಯಾನ ಪ್ರಾರಂಭವಾಗಲಿದೆ. ಎ. 23ರಂದು ನಾಮಪತ್ರ ಸಲ್ಲಿಸಲಿದ್ದೇನೆ. ಬೆಳಗ್ಗೆ 10 ಗಂಟೆಗೆ ಅನಂತಶಯನ ವೃತ್ತದಿಂದ ಮೆರವಣಿಗೆ ನಡೆಯಲಿದೆ. 11 ಗಂಟೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ. 11.30ರಿಂದ ಕುಕ್ಕುಂದೂರು ಪಂಚಾಯತ್ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.
ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಜಾತಿರಾಜಕಾರಣ, ಹಣದ ಆಮಿಷ ಒಡ್ಡುತ್ತಾ ಕೀಳು ರಾಜಕೀಯ ನಡೆಸುತ್ತಿದೆ. ಆದರೆ ಬಿಜೆಪಿ ಅಭಿವೃದ್ಧಿಯ ದೃಷ್ಟಿಯಿಂದ ರಾಜಕೀಯ ನಡೆಸುತ್ತಿದೆ ಎಂದರು.
ಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರ ಅಧ್ಯಕ್ಷ ಮಣಿರಾಜ್ ಶೆಟ್ಟಿ, ವಕ್ತಾರ ಹರೀಶ್ ಶೆಣೈ, ನಗರ ಅಧ್ಯಕ್ಷ ಅನಂತಕೃಷ್ಣ ಶೆಣೈ, ಆನಂದ ಬಂಡೀಮಠ, ದಯಾನಂದ ಹೆಗ್ಡೆ ಉಪಸ್ಥಿತರಿದ್ದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…