ಎ. 8 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರಿಗೆ -Vishwanews24

Featured, ದಕ್ಷಿಣ ಕನ್ನಡ

ಎ. 8 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರಿಗೆ -Vishwanews24

ಮಂಗಳೂರು, (Vishwanews24) : ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಎಪ್ರಿಲ್ 8 ಮತ್ತು 9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಎಪ್ರಿಲ್ 8 ರಂದು ಸಂಜೆ 4.10 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 5 ಗಂಟೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಸ್ಥಳೀಯರಿಂದ ಮನವಿ ಸ್ವೀಕರಿಸಲಿದ್ದಾರೆ. ಸಂಜೆ 5.30ಕ್ಕೆ ಪುತ್ತೂರು ನೆಹರು ನಗರದ ವಿವೇಕಾನಂದ ಕ್ಯಾಂಪಸ್‍ನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದವರು ನಿರ್ಮಿಸಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ (CBSC) ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಉಡುಪಿ : ಕೋವಿಡ್ ತಪಾಸಣೆ, ಮಾರ್ಗಸೂಚಿ ಪಾಲನೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಸಂಜೆ 6.30ಕ್ಕೆ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಕಾಲೇಜಿನ 20ನೇ ವರ್ಷದ (ವಿಂಶತಿ) ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ರಾತ್ರಿ 8ಕ್ಕೆ ಗಂಟೆಗೆ ಪುತ್ತೂರು ತಾಲೂಕಿನ ಕೆಳಗಿನ ಕುಂಜಾಡಿ ಗ್ರಾಮದಲ್ಲಿ ನಡೆಯಲಿರುವ ಧರ್ಮನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಪುತ್ತೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಎಪ್ರಿಲ್ 9 ರಂದು ಬೆಳಿಗ್ಗೆ 9 ಗಂಟೆಗೆ ಕಡಬ ತಾಲೂಕಿನ ರಾಮಕುಂಜದ ಶ್ರೀ ರಾಮ ಕುಂಜೇಶ್ವರ ವಿದ್ಯಾಸಂಸ್ಥೆಗಳ ಆವರಣದಲ್ಲಿ ಪೂಜ್ಯ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀ ಪಾದರ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.30 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಉಡುಪಿ : ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಲು ಕ್ರಮ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24