ಮಂಗಳೂರು, (Vishwanews24) : ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಎಪ್ರಿಲ್ 8 ಮತ್ತು 9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಎಪ್ರಿಲ್ 8 ರಂದು ಸಂಜೆ 4.10 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 5 ಗಂಟೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಸ್ಥಳೀಯರಿಂದ ಮನವಿ ಸ್ವೀಕರಿಸಲಿದ್ದಾರೆ. ಸಂಜೆ 5.30ಕ್ಕೆ ಪುತ್ತೂರು ನೆಹರು ನಗರದ ವಿವೇಕಾನಂದ ಕ್ಯಾಂಪಸ್ನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದವರು ನಿರ್ಮಿಸಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ (CBSC) ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ : ಕೋವಿಡ್ ತಪಾಸಣೆ, ಮಾರ್ಗಸೂಚಿ ಪಾಲನೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಸಂಜೆ 6.30ಕ್ಕೆ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಕಾಲೇಜಿನ 20ನೇ ವರ್ಷದ (ವಿಂಶತಿ) ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ರಾತ್ರಿ 8ಕ್ಕೆ ಗಂಟೆಗೆ ಪುತ್ತೂರು ತಾಲೂಕಿನ ಕೆಳಗಿನ ಕುಂಜಾಡಿ ಗ್ರಾಮದಲ್ಲಿ ನಡೆಯಲಿರುವ ಧರ್ಮನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಪುತ್ತೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಎಪ್ರಿಲ್ 9 ರಂದು ಬೆಳಿಗ್ಗೆ 9 ಗಂಟೆಗೆ ಕಡಬ ತಾಲೂಕಿನ ರಾಮಕುಂಜದ ಶ್ರೀ ರಾಮ ಕುಂಜೇಶ್ವರ ವಿದ್ಯಾಸಂಸ್ಥೆಗಳ ಆವರಣದಲ್ಲಿ ಪೂಜ್ಯ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀ ಪಾದರ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.30 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…