Featured

ಎ.9ರಂದು ಮಂಗಳೂರಿನಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ – vishwanews24

ಎ.9ರಂದು ಮಂಗಳೂರಿನಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ

ಮಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರದ ಜನವಿರೋಧಿ ನೀತಿ ಹಾಗೂ ಬೆಲೆ ಏರಿಕೆ ನಿರ್ಧಾರವನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಎ.9ರಂದು ಮಧ್ಯಾಹ್ನ 3 ಕ್ಕೆ ನಗರದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ. ಇದರಲ್ಲಿ ಎಲ್ಲ ಜಿಲ್ಲಾ ಘಟಕಗಳಿಗೆ ಭಾಗವಹಿಸಲು ಸೂಚಿಸಲಾಗಿದೆ. ಇದರೊಂದಿಗೆ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಕಾರ್ಯಕರ್ತರು ಭಾಗವಹಿಸುವರು ಎಂದು ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಅವರು, ಡಾ|ಬಿ.ಆರ್‌ ಅಂಬೇಡ್ಕರ್‌ (ಜ್ಯೋತಿ) ವೃತ್ತದಿಂದ ಮಂಗಳೂರಿನ ಕ್ಲಾಕ್‌ ಟವರ್‌ ಬಳಿಯಿರುವ ಮಿನಿ ವಿಧಾನಸೌಧದ ತನಕ ಪಾದಯಾತ್ರೆ ಬಳಿಕ ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ. ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷನಾಯಕ ಆರ್‌. ಅಶೋಕ್‌ ಸೇರಿದಂತೆ ವಿವಿಧ ನಾಯಕರು ಭಾಗವಹಿಸಲಿದ್ದಾರೆ ಎಂದರು.

ಪೂರ್ವಭಾವಿ ಸಭೆಯಲ್ಲಿ ಸಂಸದ ಕ್ಯಾ| ಬ್ರಿಜೇಶ್‌ ಚೌಟ, ಶಾಸಕರಾದ ಹರೀಶ್‌ ಪೂಂಜಾ, ಉಮಾನಾಥ್‌ ಕೋಟ್ಯಾನ್‌, ರಾಜೇಶ್‌ ನಾೖಕ್‌, ಡಿ. ವೇದವ್ಯಾಸ ಕಾಮತ್‌, ಡಾ|ವೈ.ಭರತ್‌ ಶೆಟ್ಟಿ, ಭಾಗೀರಥಿ ಮುರುಳ್ಯ, ವಿ.ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ, ಮಾಜಿ ಶಾಸಕರಾದ ಕೆ.ಮೋನಪ್ಪ ಭಂಡಾರಿ, ಕ್ಯಾ| ಗಣೇಶ್‌ ಕಾರ್ಣಿಕ್‌, ಸಂಜೀವ ಮಠಂದೂರು, ಕಾರ್ಯಕ್ರಮದ ಉಸ್ತುವಾರಿ ಉದಯ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಪ್ರಸ್ತಾವಿಸಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಯತೀಶ್‌ ಆರ್ವಾರ್‌ ನಿರೂಪಿಸಿದರು. ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ| ಮಂಜುಳಾ ಎ.ರಾವ್‌ ವಂದಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago