Featured

ಏಕಕಾಲದಲ್ಲಿ ಮೊಬೈಲ್​ಗಳಿಗೆ ಬಂತು ಬೀಪ್ ಶಬ್ಧದೊಂದಿಗೆ ಅಲರ್ಟ್​ ಮೆಸೇಜ್ ; ಏನಿದು? Vishwanews24

ಏಕಕಾಲದಲ್ಲಿ ಮೊಬೈಲ್​ಗಳಿಗೆ ಬಂತು ಬೀಪ್ ಶಬ್ಧದೊಂದಿಗೆ ಅಲರ್ಟ್​ ಮೆಸೇಜ್ ; ಏನಿದು?

ಬೆಂಗಳೂರು: ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‍ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು (Flash Message To Mobile) ಬಂದಿದೆ.

ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್‍ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಕುರಿತು ಕಳೆದೆರಡು ದಿಗಳಿಂದ ಸಂದೇಶಗಳು ಬರುತ್ತಿದ್ದವು. ಅಂತೆಯೇ ಇಂದು (ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಂಗ್ಲಿಷ್ ಮತ್ತು ಕನ್ನಡದಲ್ಲಿ 2 ಬಾರಿ ಫ್ಲ್ಯಾಶ್ ಮೆಸೇಜ್ ಜೊತೆ ವಿಭಿನ್ನ ಶಬ್ದ ಕೂಡ ಮೊಬೈಲ್‍ಗೆ ಬಂದಿದೆ.

ಸಂದೇಶದಲ್ಲಿ ಏನಿತ್ತು..?: ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ (Alert Test Message) ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ರೀತಿಯ ಪ್ರತಿಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಲಾಗಿದೆ.

ಭಯಪಡಬೇಡಿ: ಈ ಮೊದಲು ಕಳುಹಿಸಲಾಗಿದ್ದ ಸಂದೇಶದಲ್ಲಿ ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ಧದೊಂದಿಗೆ ಸಂದೇಶ ಫ್ಲ್ಯಾಶ್ ಆಗಲಿದೆ. ಬಳಕೆದಾರರು ಓಕೆ ಕೊಡುವವರೆಗೂ ಈ ಶಬ್ಧ ಬರುತ್ತಲೇ ಇರುತ್ತದೆ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆದರೆ ಇದಕ್ಕೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಲಾಗಿತ್ತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago